ಸುರೇಶ್ ಗೌಡರು ಜನಪರ ಕಾಳಜಿ ವ್ಯಕ್ತಿ: ವಿಜಯೇಂದ್ರ

78

Get real time updates directly on you device, subscribe now.


ತುಮಕೂರು: ಸುರೇಶ್ ಗೌಡರ ಮಾತು ಕಠೋರವಾಗಿದ್ದರೂ ಹೃದಯ ಶ್ರೀಮಂತಿಕೆಯ ವ್ಯಕ್ತಿಯಾಗಿದ್ದು ಯಾವಾಗಲೂ ಜನಪರ ಕಾಳಜಿ ಹೊಂದಿದವರಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೆಳ್ಳಾವಿ ಗ್ರಾಮದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಅಭಿಯಾನ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಕ್ರಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ದೇಶದ ಪರಿಸ್ಥಿತಿ ಶೋಚನೀಯವಾಗಿತ್ತು. ಆದನ್ನು ಸರಿ ಪಡಿಸಲು ಮೋದಿಯವರು ಬರಬೇಕಾಯಿತು. ಪ್ರಸ್ತುತ ಕಾಂಗ್ರೆಸ್ ಪರಿಸ್ಥತಿ ತಾನು ಕಳ್ಳ ಪರರನ್ನು ನಂಬ ಎಂಬಂತಾಗಿದೆ ಎಂದರು.

ರಾಜ್ಯದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 1000 ಕೋಟಿಗೂ ಹೆಚ್ಚು ಅನುದಾನ ತಂದು ರಸ್ತೆ, ಮೂಲ ಸೌಕರ್ಯ, ರೈತರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮ ಜಾರಿಗೆ ತಂದರು ಎಂದು ತಿಳಿಸಿದರು.
ಯಡಿಯೂರಪ್ಪ ಅವರಿಗೆ ಕ್ಷೇತ್ರದ ಬಗ್ಗೆ ವಿಶೇಷ ಅಭಿಮಾನವಿದ್ದು, ಪ್ರತಿ ಕಾರ್ಯಕರ್ತರೂ ತಮ್ಮ ಬೂತ್ಗಳಲ್ಲಿ ಸುರೇಶ್ಗೌಡರಿಗೆ ಬಹುಮತ ತರಿಸುವತ್ತ ಗಮನಹರಿಸಬೇಕು ಎಂದು ತಿಳಿಸಿದರು.

ಮಾಜಿ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, ವಿಧಾನಸೌಧದಲ್ಲಿ ವಿಜಯೇಂದ್ರ ಅವರ ಜೊತೆಗೆ ಕೆಲಸ ಮಾಡಲು ಕಾರ್ಯಕರ್ತರು ಶ್ರಮ ವಹಿಸಬೇಕು. ಪ್ರತಿ ಚುನಾವಣೆಯಲ್ಲೂ ಬೆಳ್ಳಾವಿಯಲ್ಲಿ ನನಗೆ ಹೆಚ್ಚು ಮತ ಲಭಿಸುತ್ತಿದ್ದು ಈ ಬಾರಿಯೂ ಅದನ್ನೇ ಪುನರಾವರ್ತಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಎಂಎಲ್ಸಿ ಹುಲಿನಾಯ್ಕರ್, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ತುಮಕೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಶಂಕರಣ್ಣ, ಬಿ.ಕೆ.ಮಂಜುನಾಥ್, ನರಸಿಂಹಮೂರ್ತಿ, ಶಿವಕುಮಾರ್ ಇನ್ನಿತರರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!