ಪಂಚರತ್ನ ಯೋಜನೆ ಬಗ್ಗೆ ಮಾಹಿತಿ ನೀಡಿದ ಲಾಲ್

229

Get real time updates directly on you device, subscribe now.


ಕೊರಟಗೆರೆ: ಮಾಜಿ ಶಾಸಕ ಪಿ.ಆರ್.ಸುಧಾಕರ್ಲಾಲ್ ಅವರು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿ ಅರಕೆರೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಜಾತ್ಯಾತೀತ ಜನತಾದಳದ ಪಂಚರತ್ನ ವಿಶೇಷ ಯೋಜನೆಗಳ ಬಗ್ಗೆ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ತಲುಪಿ ಪ್ರಚಾರ ಮಾಡಿದರು.

ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಜೆಡಿಎಸ್ ಪಕ್ಷವು ರೈತರ, ಜನ ಸಾಮಾನ್ಯರ ಪರ ಯೋಜನೆ ನೀಡುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೂಪಿಸಿರುವ ಪಂಚರತ್ನ ಮಹತ್ವಾಕಾಂಕ್ಷೆ ಯೋಜನೆಯನ್ನು ಗ್ರಾಮೀಣ ಭಾಗದ ಮನೆ ಮನೆಗೆ ತಲುಪಿಸಿ 2023ಕ್ಕೆ ಜೆಡಿಎಸ್ ಪಕ್ಷ ಬೆಂಬಲಿಸಿ ಕುಮಾರಣ್ಣನವರು ಮುಖ್ಯಮಂತ್ರಿಯಾಗಲು ಆಶೀರ್ವದಿಸಬೇಕು ಎಂದರು.

ಈ ಬಾರಿ ಕುಮಾರಣ್ಣನವರು ನಿಮ್ಮೆಲ್ಲರಾ ಬೆಂಬಲದಿಂದ ಮುಖ್ಯಮಂತ್ರಿ ಆಗಲಿದ್ದಾರೆ. ಪಂಚರತ್ನ ಯೋಜನೆಗಳಾದ ಆರೋಗ್ಯ, ರೈತರ, ಶಿಕ್ಷಣ, ಮಹಿಳಾ ಸಬಲೀಕರಣ, ಕೂಲಿ ಕಾರ್ಮಿಕರ ಶ್ರೇಯೋಭಿವೃದ್ಧಿ ಜೊತೆಗೆ ಮುಖ್ಯಮಂತ್ರಿಯಾದ 24 ತಾಸುಗಳಲ್ಲಿ ಮಹಿಳಾ ಸ್ತ್ರೀ ಶಕ್ತಿ ಸಾಲ ಮನ್ನಾಗಳಂತಹ ಜನಪರ ಕೆಲಸ ಮಾಡಲು ಅವರ ಕೈ ಬಲಪಡಿಸಬೇಕು.

ಈ ಬಾರಿ ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಪಕ್ಷ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯಲು ಕ್ಷೇತ್ರದ ಜನತೆ ಹೆಚ್ಚು ಆಶೀರ್ವಾದ ಮಾಡಬೇಕು ಎಂದು ಪ್ರಚಾರದ ವೇಳೆ ಮತದಾರರಿಗೆ ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ, ಕಾರ್ಯಾಧ್ಯಕ್ಷ ನರಸಿಂಹರಾಜು, ರಾಮಲಿಂಗಯ್ಯ, ನರಸಯ್ಯ, ಅಂಜಿನಪ್ಪ, ಮಾಜಿ ಜಿಪಂ ಸದಸ್ಯ ಲಕ್ಷ್ಮೀ ನರಸೇಗೌಡ, ಮಾಜಿ ತಾಪಂ ಸದಸ್ಯ ಜಗದೀಶ್, ರವಿಕೀರ್ತಿ, ಬೆಳಧರ ಗ್ರಾಪಂ ಮಾಜಿ ಅಧ್ಯಕ್ಷ ಮೋಹನ್, ಉಪಾಧ್ಯಕ್ಷರಾದ ಪ್ರೇಮಕುಮಾರಿ, ದೇವರಹಟ್ಟಿ ಮಹಾಲಿಂಗಯ್ಯ, ಕೋರಾ ಹೋಬಳಿ ಗ್ರಾಪಂ ಸದಸ್ಯರು, ಮುಖಂಡರು, ಕಾರ್ಯಕರ್ತರು ಪ್ರಚಾರದಲ್ಲಿ ಭಾಗಿಯಾಗಿದ್ದರು.

Get real time updates directly on you device, subscribe now.

Comments are closed.

error: Content is protected !!