ಬಿಜೆಪಿ ಅಧಿಕಾರ ಹಿಡಿಯೋದು ಖಚಿತ: ಎಸ್ಪಿಎಂ

166

Get real time updates directly on you device, subscribe now.


ಗುಬ್ಬಿ: ಈ ಬಾರಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರ ಹಿಡಿಯುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ಸಂಸದ ಮುದ್ದ ಹನುಮೇಗೌಡ ಹೇಳಿದರು.

ತಾಲ್ಲೂಕಿನ ಕಡಬ ಗ್ರಾಮದಲ್ಲಿ ಬೂತ್ ಸಂಪರ್ಕ ಅಭಿಯಾನದಲ್ಲಿ ಮನೆ ಮನೆಗೆ ಕೇಂದ್ರ ಮತ್ತು ರಾಜ್ಯಸರ್ಕಾರದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ತಲುಪುವಂತಹ ನೂರಾರು ಯೋಜನೆ ಮಾಡಿದ್ದು ಇದರಿಂದ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದರು.

ರೈತರ ಹಿತ ಕಾಯುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದ್ದು, ಅಡಿಕೆ ಹಾಗೂ ತೆಂಗು ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿರ್ಧಾರ ಮಾಡಲು ಎಲ್ಲಾ ರೀತಿಯ ಯೋಜನೆ ಮಾಡಿದ್ದು ಇದರಿಂದ ರೈತರಿಗೆ ಅನುಕೂಲವಾಗುತ್ತದೆ, ಒಂದು ಮನೆ ಎಂದ ಮೇಲೆ ಹಲವು ಸಮಸ್ಯೆ ಇರುತ್ತದೆ, ಹಾಗೆ ಪಕ್ಷದಲ್ಲಿ ಚಿಕ್ಕ ಪುಟ್ಟ ಸಮಸ್ಯೆಗಳಿರಬಹುದು, ಅವೆಲ್ಲವನ್ನು ಬದಿಗಿರಿಸಿ ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದೆ ಬರುತ್ತದೆ, ರಾಜ್ಯದಲ್ಲಿ ನಮ್ಮ ಹೆಚ್ಚಿನ ಶಾಸಕರು ಆಯ್ಕೆಯಾಗುತ್ತಾರೆ ಎಂದರು.

ನಾನು ಯಾವುದೇ ಅಸೆ, ಆಮಿಷ ಇಟ್ಟುಕೊಂಡು ಪಕ್ಷಕ್ಕೆ ಬಂದಿಲ್ಲ. ಇಲ್ಲಿನ ಸಿದ್ಧಾಂತ ಮೆಚ್ಚಿ ಬಂದಿದ್ದೇನೆ. ನಮ್ಮ ಪಕ್ಷ ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿದೆ. ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೂ ಇಡೀ ಜಿಲ್ಲೆಯ ಎಲ್ಲಾ ಭಾಗದಲ್ಲಿಯೂ ಸಂಚಾರ ಮಾಡುತ್ತಿದ್ದೂ ಬಿಜೆಪಿ ಪಕ್ಷದ ಅಭಿವೃದ್ಧಿ ಕೆಲಸಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮುಖಂಡ ಜಿ.ಎಸ್.ಬೆಟ್ಟ ಸ್ವಾಮಿ ಮಾತನಾಡಿ, ಗುಬ್ಬಿ ತಾಲೂಕಿನ ಪ್ರತಿ ಮನೆಗೂ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸ ತಿಳಿಸುತ್ತಿದ್ದೇವೆ ಎಂದು ತಿಳಿಸಿದರು.

ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ, ಇಂದು ಕಡಬ ಕೆರೆ ಸಂಪೂರ್ಣವಾಗಿ ತುಂಬಿದೆ ಎಂದರೆ ಅದಕ್ಕೆ ಕಾರಣ ಬಿಜೆಪಿ ಸರ್ಕಾರ ಕಾರಣ, ನಮ್ಮ ಸರ್ಕಾರ ಆಡಳಿತದಲ್ಲಿದ್ದರೆ ಇಡೀ ರಾಜ್ಯ ನೆಮ್ಮದಿಯಾಗಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಂಚಕ್ಷರಿ, ಬಿಜೆಪಿ ಮುಖಂಡರಾದ ಪಾರ್ಥ ಸಾರಥಿ, ಗ್ರಾಮ ಪಂಚಾಯತಿ ಅಧ್ಯಕ್ಷ ರಂಗನಾಥ್, ರಾಜೇಶ್, ಶ್ರೀನಿವಾಸ್ ಇನ್ನಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!