ಅಪಘಾತದಲ್ಲಿ ಇಬ್ಬರ ದುರ್ಮರಣ

38,074

Get real time updates directly on you device, subscribe now.


ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿ ಅಗ್ರಹಾರ ಗ್ರಾಮದ ರಾಜ್ಯ ಹೆದ್ದಾರಿ ತಿರುವಿನಲ್ಲಿ ಕಾರುಗಳ ನಡುವೆ ಮುಖಾಮುಖಿ ಅಪಘಾತ ನಡೆದಿದೆ.

ಅಪಘಾತದ ರಭಸಕ್ಕೆ ಎರಡು ಕಾರುಗಳ ಗಾಜು ಪುಡಿಪುಡಿ ಆಗಿವೆ. ಸ್ಥಳದಲ್ಲಿಯೇ ಕಾರಿನಲ್ಲಿದ್ದ ಮಹಿಳೆ ಜರಿನ್ ತಾಜ್ (50) ಮತ್ತು ಗುಲ್ಸರ್ (55) ಮೃತ ಪಟ್ಟಿದ್ದಾರೆ.

ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಕೊರಟಗೆರೆ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ. ನಾಲ್ಕು ಜನ ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಸ್ಥಳಕ್ಕೆ ಸಿಪಿಐ ಸುರೇಶ್, ಪಿಎಸೈ ಮಂಜುಳ, ಎಎಸೈ ಯೊಗೀಶ್, ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!