ಅಧಿಕಾರಿಗಳಿಂದ ರಾಷ್ಟ್ರ ಧ್ವಜಕ್ಕೆ ಅಪಮಾನ

181

Get real time updates directly on you device, subscribe now.


ಗುಬ್ಬಿ: ರಾಷ್ಟ್ರ ಧ್ವಜವನ್ನು ರಾತ್ರಿ 7.30 ಆದರೂ ಕೆಳಗೆ ಇಳಿಸದೆ ಗುಬ್ಬಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಲೋಪ ಎಸಗಿದ್ದಾರೆ.

ಗುರುವಾರ ಬೆಳಗ್ಗೆ ಗಣ ರಾಜ್ಯೋತ್ಸವದ ಅಂಗವಾಗಿ ಕಚೇರಿಯ ಆವರಣದಲ್ಲಿ ಆರಿಸಿದ್ದ ರಾಷ್ಟ್ರಧ್ವಜವನ್ನು ನಿಯಮಾನುಸಾರ ಸೂರ್ಯಾಸ್ತಕ್ಕೆ ಮುಂಚೆ ಇಳಿಸದೆ ಇರುವುದನ್ನು ಗಮನಿಸಿದ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮಾಧ್ಯಮದವರು ಸ್ಥಳಕ್ಕೆ ಆಗಮಿಸಿದ ನಂತರ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಆತುರದಲ್ಲಿ ರಾಷ್ಟ್ರ ಧ್ವಜ ಕೆಳಗೆ ಇಳಿಸಿದ್ದಾರೆ.

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದು ದೇಶದ್ರೋಹ ಪ್ರಕರಣವಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪ ಸ್ವಾಮಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ನಿಯಮಾನುಸಾರ ಗೌರವಯುತವಾಗಿ ಸೂರ್ಯಸ್ತಕ್ಕೆ ಮುಂಚೆ ರಾಷ್ಟ್ರ ಧ್ವಜವನ್ನು ಕೆಳಗೆ ಇಳಿಸದೆ ಕರ್ತವ್ಯ ಲೋಪ ಎಸಗಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ರಾಷ್ಟ್ರಧ್ವಜವನ್ನು ಸೂರ್ಯಾಸ್ತಕ್ಕೆ ಮುಂಚೆ ಇಳಿಸದೆ ಇರುವುದು ನನ್ನ ಗಮನಕ್ಕೆ ಬಂದಿದ್ದು, ಕಾನೂನು ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಂಬಂಧಿಸಿದವರ ಮೇಲೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!