ಶಿರಾ: ರಾಜ್ಯ ಸರ್ಕಾರಿ ಬಸ್ನ ಚಾಲಕನೋರ್ವ ಕೆರೆಯಲ್ಲಿ ಬಸ್ ಚಾಲನೆ ಮಾಡುವಾಗ ರಸ್ತೆ ಪಕ್ಕದ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿ ಸಾಹಸ ಮೆರೆದಿರುವ ಘಟನೆ ಶಿರಾ ತಾಲೂಕು ಹಂದಿಕುಂಟೆ ಅಗ್ರಹಾರದಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ಶಿರಾ ಘಟಕದ ಬಸ್ ಚಾಲಕ ಮಂಜುನಾಥ್, ಶಿರಾದಿಂದ ನಾಗಪ್ಪನಹಳ್ಳಿ ಗೇಟ್ ಮಾರ್ಗವಾಗಿ ಬರುತ್ತಿದ್ದಾಗ ಹಂದಿಕುಂಟೆ ಅಗ್ರಹಾರ ಕೆರೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಮುಳುಗುತ್ತಿರುವುದನ್ನು ಗಮನಿಸಿದ್ದಾರೆ.
ಕೂಡಲೇ ಎಚ್ಚೆತ್ತುಕೊಂಡ ಬಸ್ ಚಾಲಕ ತಮ್ಮ ಜೀವದ ಹಂಗನ್ನು ತೊರೆದು ಕೆರೆಗೆ ಧುಮುಕಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.
ಶಿರಾ ತಾಲೂಕು ಕಾಮಗೊಂಡನಹಳ್ಳಿಯ ಇವರು ಭಾನುವಾರ ಮಧ್ಯಾಹ್ನ ಬರಗೂರು ಕಡೆಗೆ ಹೋಗುವಾಗ ಇದ್ದಕಿದ್ದ ಹಾಗೆ ಮಹಿಳೆಯೊಬ್ಬಳು ಬಸ್ಗೆ ಅಡ್ಡಲಾಗಿ ಬಂದು ಕೂಗಿಕೊಂಡು, ನನ್ನ ಮಕ್ಕಳಿಬ್ಬರು ಕೆರೆಯಲ್ಲಿ ಬಿದ್ದು ಮುಳುಗಿದ್ದಾರೆ ರಕ್ಷಿಸಿ ಎಂದು ಕೂಗಿಕೊಂಡಾಗ ತಕ್ಷಣವೇ ಮಂಜುನಾಥ್ ಬಸ್ ನಿಲ್ಲಿಸಿ ಮುಳುಗಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
Comments are closed.