ಹುಲ್ಲಿನ ಮೆದೆಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

247

Get real time updates directly on you device, subscribe now.


ಕುಣಿಗಲ್: ದುಷ್ಕರ್ಮಿಗಳು ಮೂವರು ರೈತರಿಗೆ ಸೇರಿದ ಐದು ಹುಲ್ಲಿನ ಮೆದೆಗಳಿಗೆ ಬೆಂಕಿ ಇಟ್ಟ ಪರಿಣಾಮ ಮೆದೆಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಘಟನೆ ನೀಲತ್ತಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ತಡರಾತ್ರಿ ನೀಲತ್ತಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ರೈತರಾದ ಸಿದ್ದಗಂಗಯ್ಯನಿಗೆ ಸೇರಿದ ಎರಡು, ದೇವರಾಜುಗೆ ಸೇರಿದ ಒಂದು ಹಾಗೂ ದೇವಿರಮ್ಮ ಎಂಬುವರಿಗೆ ಸೇರಿದ ಎರಡು ಹುಲ್ಲಿನ ಮೆದೆಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ.

ಶನಿವಾರ ಬೆಳಗ್ಗೆ ನೋಡಿದಾಗ ಮೆದೆಗಳು ಸಂಪೂರ್ಣ ಸುಟ್ಟು ಹೋಗಿದೆ. ಮೊದಲೆ ಅತಿವೃಷ್ಟಿಯಿಂದ ಬೆಳೆ ಸರಿಯಾಗಿ ಇಲ್ಲದೆ ಇರುವ ಅಲ್ಪಸ್ವಲ್ಪ ಹುಲ್ಲನ್ನು ಸಂಗ್ರಹಿಸಿಟ್ಟುಕೊಂಡು ಜಾನುವಾರುಗಳಿಗೆ ಮೇವು ಹಾಕುತ್ತಿದ್ದ ರೈತರು ದುಷ್ಕರ್ಮಿಗಳ ಕೃತ್ಯದಿಂದ ಪರದಾಡುವಂತಾಗಿದ್ದಾರೆ. ಘಟನೆಯಲ್ಲಿ ಸುಮಾರು ಒಂದು ಲಕ್ಷ ರೂ. ಗೂ ಹೆಚ್ಚು ಮೌಲ್ಯದ ಹುಲ್ಲು ಬೆಂಕಿಗೆ ಆಹುತಿಯಾಗಿದೆ. ಘಟನೆ ಸಂಬಂಧ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!