ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

409

Get real time updates directly on you device, subscribe now.


ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಂಡೋಣಿ ಗ್ರಾಮದ ಸಿದ್ದರಾಜು ಬಿನ್ ನರಸಿಂಹಯ್ಯ (45) ಎಂಬ ಬಡರೈತ ಸಾಲಬಾದೆ ತಾಳಲಾರದ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಡೋಣಿ ಗ್ರಾಮದ ಸರ್ವೆ ನಂಬರ್ 22/2 ರ ತನ್ನ ಜಮೀನಿನಲ್ಲಿದ್ದ ತಗಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೊರಟಗೆರೆ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜಮೀನಿನ ಅಭಿವೃದ್ಧಿಗೆ ಸುಮಾರು ೫ ಲಕ್ಷಕ್ಕೂ ಹೆಚ್ಚು ಸಾಲವನ್ನು ಪಡೆದಿದ್ದರು ಮತ್ತು ವಿಎಸ್‌ಎಸ್‌ಎನ್ ಬೆಂಡೋಣಿ ಶಾಖೆಯಲ್ಲಿ ೧ ಲಕ್ಷ ಸಾಲ ಪಡೆದಿದ್ದರು, ಖಾಸಗಿ ಫೈನಾನ್ಸ್ ಸಂಸ್ಥೆಯಾದ ಸಮಸ್ತ ಫೈನಾನ್ಸ್ ನಲ್ಲಿ 70 ಸಾವಿರ ರೂ ಗಳನ್ನೂ ಹೈನುಗಾರಿಕೆಗಾಗಿ ಸಾಲ, ತನ್ನ ಮಗನ ಆರೋಗ್ಯದ ಕಾರಣದಿಂದ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಸಾಲ ಮಾಡಿಕೊಂಡಿದ್ದು ಸುಮಾರು 10 ರಿಂದ 12 ಲಕ್ಷ ಸಾಲ ಮಾಡಿಕೊಂಡು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸಾಲವನ್ನು ತೀರಿಸಲಾಗದೆ ಪ್ರತಿನಿತ್ಯ ಪರದಾಡುತ್ತಿದ್ದ ವ್ಯಕ್ತಿಗೆ ಕೆನರಾ ಬ್ಯಾಂಕ್ ಸಾಲವನ್ನು ತೀರಿಸುವಂತೆ ನೋಟಿಸನ್ನು ನೀಡಿತ್ತು. ಹೀಗಾಗಿ ಸಾಲವನ್ನು ತೀರಿಸಲಾಗದೆ ಮಕ್ಕಳ ವಿದ್ಯಾಭಾಸವನ್ನು ಮಾಡಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡ ಬಡ ರೈತ ನೇಣಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್‌ಐ ಚಂದ್ರಕಲ ಮತ್ತು ಸಿಬ್ಬಂದಿಗಳು ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಗ್ರಾಮಸ್ಥರ ಮತ್ತು ಅಕ್ಕ ಪಕ್ಕದ ಜಮೀನಿನ ಮಾಲೀಕರ ಮಹಜರ್ ನಡೆಸಿ ಪ್ರಕರಣ ದಾಖಲಿಸಿಕೊಂಡು ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ದಾಖಲು ಮಾಡಲಾಗಿದೆ.

Get real time updates directly on you device, subscribe now.

Comments are closed.

error: Content is protected !!