ನನಗೆ ಬಿಜೆಪಿ ಟಿಕೆಟ್ ಸಿಗುವುದು ಖಚಿತ: ಸೊಗಡು ವಿಶ್ವಾಸ

148

Get real time updates directly on you device, subscribe now.


ತುಮಕೂರು: ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ಹಾಲಿ ನಗರ ಶಾಸಕ ಜ್ಯೋತಿಗಣೇಶ್ ಮಾಧ್ಯಮಗಳೊಂದಿಗೆ ಮಾತನಾಡಿದ 2 ದಿನದ ನಂತರ ಮಾತನಾಡಿರುವ ಸೊಗಡು ಶಿವಣ್ಣ ಈ ಬಾರಿಯ ಬಿಜೆಪಿ ಟಿಕೆಟ್ ನನಗೆ ಖಚಿತ. ನಾನು ನಗರದಲ್ಲಿ ನನ್ನ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆಯಾಗಲಿದೆ. ಪಕ್ಷದ ನಾಯಕರು ಮತ್ತು ತುಮಕೂರು ನಗರದ ಜನತೆ ನನ್ನ ಪರವಾಗಿದ್ದಾರೆ ಎಂದು ತಿಳಿಸಿದರು.

ನಾನು ಜನಸಂಘದಿಂದ ಬಂದಿದ್ದೇನೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದೇ, ಸಚಿವರಾಗಿಯೂ ಉತ್ತಮ ಕೆಲಸ ಮಾಡಿದ್ದೇನೆ ಎಂದು ತಿಳಿಸಿದಿರು.

ಯಾರು ಏನೇ ಹೇಳಿದರೂ ನಾನು ಬಿಜಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ, ನನ್ನ ಹಿತೈಷಿಗಳು ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಾಗಾಗಿ ಪಕ್ಷದ ಟಿಕೆಟ್ ನನಗೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಲವೇ ದಿನಗಳಲ್ಲಿ ನಗರದಾದ್ಯಂತ ಮತ ಯಾಚನೆ ಮಾಡುತ್ತೇನೆ. ಪ್ರಚಾರ ಕಾರ್ಯ ಆರಂಭಿಸುತ್ತೇನೆ. ನನ್ನ ಚುನಾವಣೆಯ ಖರ್ಚು ವೆಚ್ಚವನ್ನು ನನ್ನ ಬೆಂಬಲಿಗರೇ ನೋಡಿಕೊಳ್ಳುತ್ತಾರೆ. ನಾನು ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದು ಖಚಿತ ಎಂದು ಸೊಗಡು ಶಿವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

Get real time updates directly on you device, subscribe now.

Comments are closed.

error: Content is protected !!