ಈಜಲು ಹೋಗಿ ವಿದ್ಯಾರ್ಥಿ ಸಾವು

130

Get real time updates directly on you device, subscribe now.


ತುರುವೇಕೆರೆ: ತಾಲೂಕಿನ ಸಾರಿಗೆಹಳ್ಳಿ ಕೆರೆಯಲ್ಲಿ ಶುಕ್ರವಾರ ಸಂಜೆ ಈಜಾಡಲು ಹೋಗಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಶವ ಹೊರ ತೆಗೆಯುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಅಮ್ಮಸಂದ್ರ ನಿವಾಸಿ ಚೇತನ್(17) ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿ. ತುರುವೇಕೆರೆ ಪಟ್ಟಣದ ಜಿಜೆಸಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಶುಕ್ರವಾರ ಇಳಿ ಸಂಜೆಯಲ್ಲಿ ತನ್ನ ಸ್ನೇಹಿತರೊಂದಿಗೆ ಸಾರಿಗೆ ಹಳ್ಳಿ ಕೆರೆಗೆ ಈಜಿಗಿಳಿದು ಕಣ್ಮರೆಯಾಗಿದ್ದ, ಅಂದು ಸಂಜೆಯದ ಹಿನ್ನಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಶನಿವಾರ ವಿದ್ಯಾರ್ಥಿಯ ಶವ ಶೋಧಿಸಿ ಹೊರ ತೆಗೆದಿದ್ದಾರೆ. ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!