ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ, ಪ್ರಗತಿ ರಥಕ್ಕೆ ಚಾಲನೆ

186

Get real time updates directly on you device, subscribe now.


ತುಮಕೂರು: ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಮತ್ತು ಪ್ರಗತಿ ರಥಕ್ಕೆ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಚಾಲನೆ ನೀಡಿದರು.

ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ರಥಯಾತ್ರೆ ಹಾಗೂ ವಿಜಯರಥ ಯಾತ್ರೆ ಕುರಿತು ಮಾತನಾಡಿದ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ರಾಜ್ಯಾದ್ಯಂತ ಈ ವಿಜಯ ರಥಯಾತ್ರೆ ನಡೆಯುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸರ್ಕಾರದ ಸಾಧನೆ ಕುರಿತು ಜನರಿಗೆ ಮನದಟ್ಟು ಮಾಡಿಕೊಡುವ ನಿಟ್ಟಿನಲ್ಲಿ ದೊಡ್ಡ ಎಲ್ಸಿಡಿ ಸ್ಕ್ರೀನ್ ಇರುವ ವಾಹನದ ಮೂಲಕ ಕಾರ್ಯಕರ್ತರು ಪ್ರತಿ ಬಡಾವಣೆ, ಮನಗೆ ತೆರಳಿ ಪಕ್ಷದ ಕರಪತ್ರ ಹಂಚುವ ಜೊತೆಗೆ ಪ್ರಣಾಳಿಕೆಗೆ ಅಗತ್ಯ ಸಲಹೆ, ಸೂಚನೆ ಪಡೆಯಲಿದ್ದಾರೆ ಎಂದರು.

ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಚಾಮರಾಜ ನಗರ ಜಿಲ್ಲೆ ಮಲೆಯ ಮಹದೇಶ್ವರ ದೇವಾಲಯದ ಆವರಣದಲ್ಲಿ ವಿಜಯ ಸಂಕಲ್ಪ ಮತ್ತು ವಿಜಯರಥ ಯಾತ್ರೆಗೆ ಚಾಲನೆ ನೀಡಿದ್ದಾರೆ. ನಾವು ಕೂಡ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಈ ರಥಯಾತ್ರೆ ಆಯೋಜಿಸಿದ್ದೇವೆ. ಚುನಾವಣೆ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನೋಪಯೋಗಿ ಕೆಲಸಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವುದೇ ಇದರ ಹಿಂದಿನ ಉದ್ದೇಶ ಎಂದರು.
ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ, ಬಿಜೆಪಿಯ ಎಲ್ಲಾ ಮುಖಂಡರ ಸಮ್ಮುಖದಲ್ಲಿ ಸಿದ್ದಗಂಗಾ ಮಠದ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ನಗರದ ದೇವ ಮೂಲೆಯಾದ ದೇವರಾಯ ಪಟ್ಟಣದಿಂದ ವಿಜಯರಥ ಯಾತ್ರೆ ಆರಂಭವಾಗಿದ್ದು, ನಗರದ 35ನೇ ವಾರ್ಡ್ನಲ್ಲಿ ಸಂಚರಿಸಲಿದೆ. ಮುಂದಿನ 25 ದಿನಗಳಲ್ಲಿ ನಗರದ 35 ವಾರ್ಡ್ಗಳ ಎಲ್ಲಾ ಬೂತ್ಗಳಿಗೂ ಈ ರಥಯಾತ್ರೆ ತಲುಪಲಿದೆ ಎಂದರು.

ಮಾರ್ಚ್ 1 ರಂದು ರಾಜ್ಯದ ನಾಲ್ಕು ಮೂಲೆಗಳಿಂದ ವಿಜಯ ರಥಯಾತ್ರೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಷಾ, ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ. ನಮ್ಮದು ಯಾವುದೇ ವೈಯಕ್ತಿಕ ಇಲ್ಲ. ಎಲ್ಲವೂ ಪಕ್ಷದ ಕಾರ್ಯಕ್ರಮ ಎಂದರು.
ದೇವರಾಯ ಪಟ್ಟಣದ ದೇವಮೂಲೆಯಾದ ಸಿದ್ದಿವಿನಾಯಕ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಗತಿ ರಥ ಯಾತ್ರೆಯೊಂದಿಗೆ ಪ್ರಚಾರ ಆರಂಭಿಸಲಾಯಿತು.
ಈ ಸಂದರ್ಭದಲ್ಲಿ ತುಮಕೂರು ನಗರ ಮಂಡಲ ಅಧ್ಯಕ್ಷ ಹನುಮಂತರಾಜು, ನಗರಪಾಲಿಕೆಯ ಎಲ್ಲಾ ಕಾರ್ಪೋರೇಟರ್ಸ್, ಯುವ ಮೋರ್ಚಾ ಕಾರ್ಯಕರ್ತರು, ಪಕ್ಷದ ಮುಖಂಡರು ಭಾಗಿಯಾಗಿದ್ದರು.

Get real time updates directly on you device, subscribe now.

Comments are closed.

error: Content is protected !!