ವಿದ್ಯುತ್ ಶಾಕ್ಗೆ ರೈತ ಬಲಿ

119

Get real time updates directly on you device, subscribe now.


ತುರುವೇಕೆರೆ: ತಾಲೂಕಿನ ಮಾರಪ್ಪನಹಳ್ಳಿಯ ರೈತ ಅಡಿಕೆ ತಾಕಿಗೆ ನೀರು ಹಾಯಿಸುವ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಮಾರಪ್ಪನಹಳ್ಳಿ ಗ್ರಾಮದ ರೈತ ನಂಜೇಗೌಡ (25) ಮೃತ ದುರ್ದೈವಿಯಾಗಿದ್ದಾರೆ. ಕೊಳಾಲ ಮಾರ್ಗದಲ್ಲಿರುವ ತನ್ನ ತೋಟದಲ್ಲಿ ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಆಘಾತಕ್ಕೊಳಗಾದ ಇವರನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಗಿ ಸಂಬಂಧಿಕರು ತಿಳಿಸಿದ್ದಾರೆ.

ರೈತ ವಿದ್ಯುತ್ ಆಘಾತದಿಂದ ಮೃತಪಟ್ಟಿರುವ ಸುದ್ದಿ ತಿಳಿದ ಶಾಸಕ ಮಸಾಲ ಜಯರಾಮ್ ಆಸ್ಪತ್ರೆಯ ಶವಾಗಾರದ ಬಳಿ ಧಾವಿಸಿ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದರು. ಕೃಷಿ ಚಟುವಟಿಕೆ ನಡೆಸುವ ವೇಳೆ ಕೃಷಿಕರು ವಿದ್ಯುತ್ ಹರಿಯುವಿಕೆಯ ಬಗ್ಗೆ ಜಾಗೃತಿ ವಹಿಸುವಂತೆ ಮನವಿ ಮಾಡಿದರು. ಮೃತ ರೈತ ನಂಜೇಗೌಡರ ಸಂಬಂಧಿಕರಿಗೆ ಸರಕಾರದ ವತಿಯಿಂದ ಸೂಕ್ತ ಪರಿಹಾರ ದೊರಕಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

Get real time updates directly on you device, subscribe now.

Comments are closed.

error: Content is protected !!