ಕೊರಟಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ

142

Get real time updates directly on you device, subscribe now.


ಕೊರಟಗೆರೆ: ಬಿಜೆಪಿ ಪಕ್ಷದ ವತಿಯಿಂದ ಮಾ.16 ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಕನಕದಾಸ ವೃತ್ತದಿಂದ ಬಿಜೆಪಿಯ ಪಾಂಚಜನ್ಯ ಕಚೇರಿಯವರೆಗೆ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ತಾಲ್ಲೂ ಅಧ್ಯಕ್ಷ ಪವನ್ ಕುಮಾರ್ ತಿಳಿಸಿದರು.

ಪಟ್ಟಣದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಎಸ್ಎಸ್ಆರ್ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮವಿದೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯದ ಪ್ರಮುಖ ನಾಯಕರು ಆಗಮಿಸಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಲಿದ್ದಾರೆ ಎಂದರು.
ಬಿಜೆಪಿ ಪ್ರಬಲ ಆಕಾಂಕ್ಷಿತ ಅಭ್ಯರ್ಥಿ ಅನಿಲ್ ಕುಮಾರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸುವುದೇ ವಿಜಯ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ, ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಸೇರಿದಂತೆ ರಾಜ್ಯದ ಅನೇಕ ಬಿಜೆಪಿ ನಾಯಕರು ಆಗಮಿಸಲಿದ್ದು, ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಜೊತೆಗೆ ಕ್ಷೇತ್ರದ ಜನತೆ ಹೆಚ್ಚಿನದಾಗಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಆಕಾಂಕ್ಷಿತ ಅಭ್ಯರ್ಥಿ ಗಂಗಹನುಮಯ್ಯ, ಮಧುಗಿರಿ ಜಿಲ್ಲಾ ಉಪಾಧ್ಯಕ್ಷ ವಿಜಯ್ಕುಮಾರ್, ಪ್ರಧಾನ ಕಾರ್ಯದರ್ಶಿ ಗುರುದತ್ತ, ಮುಖಂಡ ಹೊಳವನಹಳ್ಳಿ ವೆಂಕಟಾಚಲಿ, ದಾಡಿ ವೆಂಕಟೇಶ್, ದಯಾನಂದ್, ಮಧುಗಿರಿ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು, ಮಂಡಲದ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಕಾರ್ಯಕರ್ತರು ಮುಖಂಡರು ಇದ್ದರು.

Get real time updates directly on you device, subscribe now.

Comments are closed.

error: Content is protected !!