ಅಟ್ಟಿಕಾ ಮನೆ ಮೇಲೆ ದಾಳಿ- ಆಹಾರ ಸಾಮಗ್ರಿ ವಶ

215

Get real time updates directly on you device, subscribe now.

ತುಮಕೂರು: ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರ ತುಮಕೂರಿನ ನಿವಾಸದ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಆಹಾರ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.

ತುಮಕೂರಿನ ಉಪ್ಪಾರಹಳ್ಳಿಯ ಪಿಎನ್ಕೆ ಲೇಔಟ್ನಲ್ಲಿ ಅಟ್ಟಿಕಾ ಬಾಬು ಚುನಾವಣೆಗಾಗಿಯೇ ಮನೆಯೊಂದನ್ನು ಖರೀದಿ ಮಾಡಿದ್ದು, ಅಲ್ಲಿ ಮತದಾರರಿಗೆ ಹಂಚಲು ಆಹಾರ ಸಾಮಗ್ರಿಗಳನ್ನು ಮನೆಯ ಮುಂದಿನ ಪೆಂಡಾಲ್ ಅಡಿ ಸಂಗ್ರಹಿಸಿಟ್ಟಿದ್ದರು. ವಿಷಯ ತಿಳಿದ ಚುನಾವಣಾಧಿಕಾರಿಗಳು ಅಟ್ಟಿಕಾ ಬಾಬು ನಿವಾಸದ ಮೇಲೆ ದಾಳಿ ಮಾಡಿ ಮತದಾರರಿಗೆ ಹಂಚಲು ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ಬೇಳೆ, ಉಪ್ಪು ಮೊದಲಾದ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ.

ಚುನಾವಣೆ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ಎಚ್ಚೆತ್ತುಕೊಂಡಿರುವ ಚುನಾವಣಾಧಿಕಾರಿಗಳು ತಮಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಯೊಬ್ಬರು ಆಹಾರ ಧಾನ್ಯ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ದೊರೆಯಿತು. ಹಾಗಾಗಿ ದಾಳಿ ಮಾಡಿದ್ದು ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದೆ. ಈ ಸಂಬಂಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

Get real time updates directly on you device, subscribe now.

Comments are closed.

error: Content is protected !!