ನವೀಕೃತ ಪತ್ರಿಕಾ ಭವನ ಉದ್ಘಾಟನೆ; ಸರ್ವಸದಸ್ಯರ ಮಹಾಸಭೆ ನಾಳೆ

94

Get real time updates directly on you device, subscribe now.


ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ವತಿಯಿಂದ ಮಾ.26 ರಂದು ಬೆಳಿಗ್ಗೆ 10-30 ಗಂಟೆಗೆ ನವೀಕೃತ ಪತ್ರಿಕಾಭವನ ಉದ್ಘಾಟನೆ ಹಾಗೂ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿ ಈ ಸಾಲಿನಲ್ಲಿ ಪ್ರಶಸ್ತಿ ಪುರಸ್ಕೃತಗೊಂಡ ಸದಸ್ಯರಿಗೆ ಸನ್ಮಾನ ಸಮಾರಂಭ ಮತ್ತು ಸಂಘದ ಸರ್ವ ಸದಸ್ಯರ ಮಹಾಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ತಿಳಿಸಿದ್ದಾರೆ.

ನಗರದ ಬಾಳನಕಟ್ಟೆ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಾನಿಧ್ಯವನ್ನು ಪಾವಗಡ ರಾಮಕೃಷ್ಣ ಸೇವಾ ಆಶ್ರಮದ ಶ್ರೀಜಪಾನಂದ ಮಹಾರಾಜ್ ಸ್ವಾಮೀಜಿ ವಹಿಸಲಿದ್ದು, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಡಾ.ಜಿ.ಪರಮೇಶ್ವರ್ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸುವರು. ಸಂಸದ ಜಿ.ಎಸ್.ಬಸವರಾಜು ವಿವಿಧ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದು, ಅತಿಥಿಯಾಗಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್, ಉಪಮೇಯರ್ ಟಿ.ಕೆ.ನರಸಿಂಹಮೂರ್ತಿ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಎಸ್ಪಿ ರಾಹುಲ್ ಕುಮಾರ್ ಶಹಪೂರ್ವಾಡ್, ಟೂಡಾ ಆಯುಕ್ತ ಅನಿಲ್ ಕುಮಾರ್ ಜಾದವ್, ಟೂಡಾ ಅಧ್ಯಕ್ಷ ಹೆಚ್.ಜಿ. ಚಂದ್ರಶೇಖರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್.ಮಮತ, ಮಹಾನಗರಪಾಲಿಕೆ ಆಯುಕ್ತ ದರ್ಶನ್, ಶಿಕ್ಷಣ ತಜ್ಞರು ಹಾಗೂ ವರ್ಧಮಾನ ಪಬ್ಲಿಕ್ ಶಾಲೆಯ ಛೇರ್ಮೆನ್ ಸಂಜಯ್ ಎಸ್.ಗೌಡ ಭಾಗವಹಿಸುವರು.

Get real time updates directly on you device, subscribe now.

Comments are closed.

error: Content is protected !!