ಕಾಂಗ್ರೆಸ್ ಬಿಡಲ್ಲ: ಹೊನ್ನಗಿರಿಗೌಡ

78

Get real time updates directly on you device, subscribe now.


ಗುಬ್ಬಿ: ತಾಲೂಕಿನಲ್ಲಿ ಪಕ್ಷ ಕಟ್ಟಿ ಸಂಘಟನೆ ಮಾಡಿದವರಿಗೆ ಆದ್ಯತೆ ಇಲ್ಲ ಎಂದ ಮೇಲೆ ಇನ್ನೊಬ್ಬರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಖಂಡಿತವಾಗಿಯೂ ನಾವು ಕೆಲಸ ಮಾಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಹೊನ್ನಗಿರಿಗೌಡ ತಿಳಿಸಿದರು.
ಪಟ್ಟಣದ ಮಾತನಾಡಿ, ನೆನ್ನೆ ಮೊನ್ನೆ ಬಂದಂತಹ ಬೇರೆ ಪಕ್ಷದವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬಾರದು, ನೆಲೆಯೇ ಇಲ್ಲದಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ನಾವೆಲ್ಲರೂ ಸೇರಿ ಕಟ್ಟಿದ್ದೇವೆ. ಹಾಗಾಗಿ ಎಸ್.ಆರ್.ಶ್ರೀನಿವಾಸ್ ಅವರಿಗೆ ಟಿಕೆಟ್ ಕೊಡುವುದನ್ನು ವಿರೋಧಿಸುತ್ತೇವೆ ಎಂದ ಅವರು ಪಕ್ಷದ ಹೈಕಮಾಂಡ್ ಇಷ್ಟೊಂದು ವಿರೋಧವಿದ್ದರೂ ಟಿಕೆಟ್ ನೀಡಿದ್ದು, ನಾವು ಇಲ್ಲಿ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಬೇರೆ ಪಕ್ಷಕ್ಕೂ ಸೇರುವುದಿಲ್ಲ. ಕಾಂಗ್ರೆಸ್ ಪಕ್ಷ ವಿಶಾಲವಾಗಿದ್ದು, ಕೊರಟಗೆರೆ ಕ್ಷೇತ್ರದ ಡಾ.ಜಿ.ಪರಮೇಶ್ವರ್ ಅವರ ಗೆಲುವಿಗೆ ದುಡಿಯುತ್ತೇವೆ ಎಂದು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!