ಡಾ.ಶಿವಕುಮಾರ ಶ್ರೀಗಳ 116ನೇ ಜಯಂತಿ ನಾಳೆ

440

Get real time updates directly on you device, subscribe now.


ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಕಾರ್ಯಕ್ರಮ ಸಿದ್ದಗಂಗಾ ಮಠ ಆವರಣದಲ್ಲಿ ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಎಸ್.ವಿಶ್ವನಾಥಯ್ಯ ತಿಳಿಸಿದ್ದಾರೆ.
ಕಾರ್ಯಕ್ರಮದ ಸಾನಿದ್ಯವನ್ನು ಶ್ರೀಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮಿ, ಸುತ್ತೂರು ಮಠದ ವೀರಸಿಂಹಾಸನ ಮಠದ ಅಧ್ಯಕ್ಷ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಕೆರೆಗೋಡಿ ರಂಗಾಪುರ ಮಠ ಅಧ್ಯಕ್ಷ ಗುರುಪರದೇಶಿ ಕೇಂದ್ರ ಮಹಾಸ್ವಾಮಿಗಳು ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೆರವೇರಿಸುವವರು.
ಸಂಜೆ 5 ಗಂಟೆಗೆ ಶಿವಕುಮಾರ ಸ್ವಾಮೀಜಿ ಗಾನೋತ್ಸವವನ್ನು ನಾದಬ್ರಹ್ಮ ಹಂಸಲೇಖ ನೇತೃತ್ವದಲ್ಲಿ ನೃತ್ಯ ಮತ್ತು ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!