ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ: ಶ್ರೀನಿವಾಸ್

170

Get real time updates directly on you device, subscribe now.


ಗುಬ್ಬಿ: ನಾನು ಮಾಡಿರುವ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ ಆಗಲಿದೆ ಎಂದು ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಸ್.ಆರ್.ಶ್ರೀನಿವಾಸ್ ಮನೆ ಮನೆಗೆ ತೆರಳಿ ಪ್ರಚಾರ ಮಾಡಿ ಮಾತನಾಡಿ, ಈ ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ರೀತಿಯ ಸೌಲಭ್ಯ ನೀಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿನ ಮತದಾರರು ನನ್ನನ್ನು ಕೈ ಹಿಡಿಯುತ್ತಾರೆ. ಈಗಾಗಲೇ ನಾನು ಹಿಂದೆ ಇದ್ದ ಪಕ್ಷಕ್ಕೆ ರಾಜಿನಾಮೆ ನೀಡಿದಂತಹ ನೂರಾರು ಜನರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ನನ್ನೊಟ್ಟಿಗೆ ಆಗಮಿಸುತ್ತಿರುವುದು ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದರು.

ಮುಖಂಡ ಕೊಪ್ಪ ವೆಂಕಟೇಶ್ ಮಾತನಾಡಿ, ವಾಸಣ್ಣ ಅವರಿಂದ ಜೆಡಿಎಸ್ ಪಕ್ಷ ಇತ್ತೆ ಹೊರತು ಜೆಡಿಎಸ್ನಿಂದ ವಾಸಣ್ಣ ಆಗಿರಲಿಲ್ಲ. ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯಧಿಕ ಲೀಡ್ ನೀಡುವ ಮೂಲಕ ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಸುರೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ನಮ್ಮೆಲ್ಲ ಸದಸ್ಯರು ವಾಸಣ್ಣನ ಜೊತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಮುಖಂಡರಾದ ಪಣಗಾರ್ ವೆಂಕಟೇಶ್, ಹರ್ಷ, ಸಿ.ಕೆ.ಗೌಡ, ಈಶಣ್ಣ, ಆಲಂ ಇನ್ನಿತರರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!