ಪರಂ ಸೋಲಿಸಲು ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕರಾಮತ್ತು

101

Get real time updates directly on you device, subscribe now.


ಗುಬ್ಬಿ: ಕೊರಟಗೆರೆ ಕ್ಷೇತ್ರದ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಹಾಗೂ ಅವರ ಜೊತೆಯಲ್ಲಿ ಇರುವಂತಹ ಎಲ್ಲರನ್ನು ಸೋಲಿಸಬೇಕು ಎಂಬುದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ಅವರ ಕರಾಮತ್ತು ಎಂದು ಆರೋಪಿಸಿ ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹೇಮಂತ್ ಆರೋಪಿಸಿದರು.

ಪಟ್ಟಣದ ಅವರ ಕಚೇರಿಯಲ್ಲಿ ಮಾತನಾಡಿ, ತಿಪಟೂರಿನಲ್ಲಿ ಷಡಕ್ಷರಿ, ಚಿಕ್ಕನಾಯಕನ ಹಳ್ಳಿಯಲ್ಲಿ ಕಿರಣ್ ಕುಮಾರ್ ಹಾಗೂ ಗುಬ್ಬಿಯಲ್ಲಿ ಜಿ.ಎಸ್.ಪ್ರಸನ್ನ ಕುಮಾರ್ ಈ ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಚಾರ ಇಟ್ಟುಕೊಂಡು ಗುಬ್ಬಿಯ ಪ್ರಸನ್ನ ಕುಮಾರ್ ಅವರನ್ನು ಬೇಕೆಂದೇ ಕಾಂಗ್ರೆಸ್ ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬ ಸುಳ್ಳು ಸೃಷ್ಟಿಸಿಕೊಂಡು ಅವರನ್ನು ಅಮಾನತು ಮಾಡಿದ್ದಾರೆ.

ಕಾರ್ಯಕರ್ತರು ಯಾವ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ದೂರವಾಣಿ ಕರೆ ಮೂಲಕ ಕೇಳಿದರೆ ಪರಮೇಶ್ವರ್ ಅವರು ಹೇಳಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ. ಇದರ ಬಗ್ಗೆ ಪರಮೇಶ್ವರ್ ಅವರು ದೆಹಲಿಯಲ್ಲಿದ್ದು ಅವರು ಬಂದ ಕೂಡಲೇ ಇದರ ಬಗ್ಗೆ ಮಾಹಿತಿ ಪಡೆದು ಅವರು ಹೇಳಿರುವುದು ಸುಳ್ಳಾದರೆ ಇಡೀ ಜಿಲ್ಲೆಯಲ್ಲಿ ದೊಡ್ಡಮಟ್ಟದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ನಗರ ಅಧ್ಯಕ್ಷ ಶಿವಾನಂದ ಮಾತನಾಡಿ, ಗುಬ್ಬಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆಯುವ ಸಂದರ್ಭದಲ್ಲಿ ಸುಮಾರು 5000 ಕಾರ್ಯಕರ್ತ ಹಣವನ್ನು ಜಿ.ಎಸ್.ಪ್ರಸನ್ನಕುಮಾರ್ ತುಂಬಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿದ್ದಾರೆ. ಭಾರತ್ ಜೋಡೋ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಆಗಮನದಲ್ಲಿ ಪ್ರಸನ್ನ ಕುಮಾರ್ ಹೆಚ್ಚು ಮುತುವರ್ಜಿ ವಹಿಸಿ ಕಾರ್ಯಕ್ರಮ ಯಶಸ್ವಿ ಮಾಡಿ ಯಶಸ್ವಿಗೊಳಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಎಸ್ಸಿ, ಎಸ್ಟಿ ಸಮಾವೇಶದಲ್ಲಿಯೂ ಪರಮೇಶ್ವರ್ ಅವರ ಅಣತಿಯಂತೆ ಕೆಲಸ ಮಾಡಿದ್ದು ಎಲ್ಲಿಯೂ ಸಹ ಬಂಡಾಯ ಕಾಂಗ್ರೆಸ್ ಹೋಗುವುದಿಲ್ಲ. ಕಾಂಗ್ರೆಸ್ ನಲ್ಲೇ ಉಳಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದರು ಸಹ ಲಿಂಗಾಯಿತರು ಎಂಬ ಹಿನ್ನೆಲೆಯಲ್ಲಿಯೇ ಅವರನ್ನು ಉಚ್ಛಾಟನೆ ಮಾಡಿದ್ದಾರೆ. ಅವರ ಜೊತೆಯಲ್ಲೇ ಇದ್ದಂತಹ ಹೊನ್ನಗಿರಿ ಗೌಡರನ್ನ ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆ ಲಿಂಗಾಯಿತ ಸಮಾಜಕ್ಕೆ ಕಾಣುತ್ತಿದೆ. ಕೂಡಲೇ ಇದರ ಬಗ್ಗೆ ಸರಿಯಾದ ಕ್ರಮ ತೆಗೆದುಕೊಳ್ಳದೆ ಹೋದರೆ ಹೋರಾಟದ ಹಾದಿ ಹಿಡಿಯುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗಂಗಾಧರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!