ಇಕ್ಬಾಲ್ ಅಹಮದ್ ಗೆ ತುಮಕೂರು ಕೈ ಟಿಕೆಟ್

ಮಾಜಿ ಶಾಸಕ ರಫಿಕ್ ಗೆ ಕೈ ಕೊಟ್ಟ ಕಾಂಗ್ರೆಸ್- ಅಟ್ಟಿಕಾ, ಅತೀಕ್ ಗೂ ಇಲ್ಲ ಟಿಕೆಟ್

172

Get real time updates directly on you device, subscribe now.


ತುಮಕೂರು: ತುಮಕೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಇಕ್ಬಾಲ್ ಅಹ್ಮದ್ ಅವರಿಗೆ ಘೋಷಣೆಯಾಗಿದ್ದು, ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ ಹೆಸರನ್ನು ಅಂತಿಮಗೊಳಿಸಲಾಗಿದೆ. ಎಐಸಿಸಿಯಿಂದ ಗುರುವಾರ 2ನೇ ಪಟ್ಟಿ ಬಿಡುಗಡೆ ಮಾಡಿದ್ದು ತೀವ್ರ ಪೈಪೋಟಿಯ ನಡುವೆ ಇಕ್ಬಾಲ್ ಅಹ್ಮದ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಿಕೆಟ್ ಗಾಗಿ ಮಾಜಿ ಶಾಸಕ ರಫಿಕ್ ಅಹ್ಮದ್ ಹಾಗೂ ಮುಖಂಡ ಅತೀಕ್ ಅಹ್ಮದ್ ತೀವ್ರ ಪ್ರಯತ್ನ ನಡೆಸಿದ್ದರು. ಇದರ ಮಧ್ಯೆ ಅಟ್ಟಿಕಾ ಗೋಲ್ಡ್ ಕಂಪನಿಯ ಬೊಮ್ಮನಹಳ್ಳಿ ಬಾಬು ಸಹ ಟಿಕೆಟ್ಗಾಗಿ ತೀವ್ರ ಲಾಬಿ ಮಾಡಿದ್ದರು. ಆದರೆ ಅಂತಿಮವಾಗಿ ಇಕ್ಬಾಲ್ ಅಹಮದ್ಗೆ ಟಿಕೆಟ್ ದೊರೆತಿದೆ.

ಮೊದಲ ಪಟ್ಟಿಯಲ್ಲಿ ತುಮಕೂರು ನಗರ ಕ್ಷೇತ್ರಕ್ಕೆ ಯಾರಿಗೂ ಟಿಕೆಟ್ ಘೋಷಣೆಯಾಗಿರಲಿಲ್ಲ. ಇದರಿಂದ ಯಾರಿಗೆ ಕಾಂಗ್ರೆಸ್ ಟಿಕೆಟ್ ಸಿಗಲಿದೆ ಎಂಬ ಕತೂಹಲ ಇತ್ತು. ಅಂತಿಮವಾಗಿ ಈಗ ಟಿಕೆಟ್ ಘೋಷಣೆಯಾಗುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ.
ಟಿಕೆಟ್ ಸಿಕ್ಕ ಖುಷಿಯಲ್ಲಿರುವ ಇಕ್ಬಾಲ್ ಅಹಮದ್ ವರಿಷ್ಠರಿಗೆ ಧನ್ಯವಾದ ಹೇಳಿದ್ದಾರೆ. ಇವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಇನ್ನು ಜೆಡಿಸ್ ನಿಂದ ಉಚ್ಛಾಟಿತರಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ ಅವರಿಗೆ ಟಿಕೆಟ್ ನೀಡಲಾಗಿದೆ. ಇವರಿಗೆ ಟಿಕೆಟ್ ನೀಡುವುದಕ್ಕೆ ಮುಖಂಡರಾದ ಪ್ರಸನ್ನಕುಮಾರ್, ಹೊನ್ನಗಿರಿಗೌಡ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ನಮ್ಮಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದ್ದರು. ಆದರೆ ಈ ಇಬ್ಬರು ನಾಯಕರಿಗೂ ನಿರಾಸೆಯಾಗಿದ್ದು, ಶ್ರೀನಿವಾಸ್ ಕಾಂಗ್ರೆಸ್ ಟಿಕೆಟ್ ಪಡೆದು ಗುಬ್ಬಿ ಕ್ಷೇತ್ರದಲ್ಲಿ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!