ಬಿಜೆಪಿ ದುರಾಡಳಿತದಿಂದ ನ್ಯಾಯವೂ ಸತ್ತಿದೆ

126

Get real time updates directly on you device, subscribe now.


ಗುಬ್ಬಿ: ಬಿಜೆಪಿಯ ದುರಾಡಳಿತದಿಂದ ನ್ಯಾಯವೂ ಸತ್ತು ಹೋಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಅಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಪಾಳ್ಯ, ಕಳ್ಳಿಪಾಳ್ಯ, ಅಡಗೂರು, ಪ್ರಭುವನಹಳ್ಳಿ, ಬಿಳಿಗೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿ ಮಾತನಾಡಿ, ಈ ಬಾರಿ ಕಾಂಗ್ರೆಸ್ಸಿಗೆ ಜನರ ಮಿಡಿತ ಹೆಚ್ಚಾಗಿದೆ. ಬಿಜೆಪಿ ಸರ್ಕಾರ ಮಾಡಿರುವ ಪ್ರತಿ ವಸ್ತುವಿನ ದುಬಾರಿ ಬೆಲೆ ಅವರಿಗೆ ಮಾರಕವಾಗುತ್ತದೆ ಎಂದರು.

ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು ಬಿಜೆಪಿಯ ದುರಾಡಳಿತದಿಂದಾಗಿ ಈ ಬಾರಿ ಬಿಜೆಪಿಗೆ ಜನರು ಪಾಠ ಕಲಿಸುತ್ತಾರೆ ಎಂದರು.
ಅಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ಹಳ್ಳಿಗಳಲ್ಲಿ ಹೆಚ್ಚು ಜನರು ಪ್ರೀತಿ ವಿಶ್ವಾಸದಿಂದ ನಮ್ಮ ಜೊತೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಖಂಡಿತವಾಗಿ ಈ ಗ್ರಾಮ ಪಂಚಾಯಿತಿ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುತ್ತಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಕೇಬಲ್ ರಾಜು ಮಾತನಾಡಿ, ನಮ್ಮ ವ್ಯಾಪ್ತಿಯ ಪ್ರತಿ ಹಳ್ಳಿಗಳಲ್ಲೂ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಅವರ ಸರಳ ಜೀವನ ಇಲ್ಲಿರುವ ಹಿಂದುಳಿದ ವರ್ಗದ ಎಲ್ಲಾ ಸಮುದಾಯಗಳಿಗೆ ಆಶಾ ಕಿರಣವಾಗಿದೆ. ಹಾಗಾಗಿ ಅವರು ಹೆಚ್ಚು ಮತ ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಡಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತ್ಯನಾರಾಯಣ ಮಾತನಾಡಿ, ವಾಸಣ್ಣ ಅಭಿಮಾನಿಗಳು ಮತ್ತು ಕಾಂಗ್ರೆಸ್ ನೂರಾರು ಕಾರ್ಯಕರ್ತರು ಜೊತೆಯಾಗಿ ಪ್ರಚಾರದಲ್ಲಿ ಕೈಗೊಂಡಿದ್ದು ಯಶಸ್ವಿಯಾಗಿ ಅಡಗೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿದೆ. ಕಳೆದ ಬಾರಿಗಿಂತಲೂ ಈ ಬಾರಿ ಪ್ರಚಾರದಲ್ಲಿಯುವಕರು ಹೆಚ್ಚು ಆಸಕ್ತಿ ವಹಿಸಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಕರೆತಿಮ್ಮಯ್ಯ, ಚನ್ನ ಬಸವೇಗೌಡ, ಬೀರೇಶ್, ಜಗದೀಶ್, ಗಿರೀಶ್, ಬಸವರಾಜು, ನಾಗಣ್ಣ, ಜಗದೀಶ್ ಇನ್ನಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!