ಪರಂ ಆಶೀರ್ವಾದ ಪಡೆದ ವಿಜಯೇಂದ್ರ

113

Get real time updates directly on you device, subscribe now.


ಕುಣಿಗಲ್: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಬಿಎಸ್ವೈ ಪುತ್ರ ವಿಜಯೇಂದ್ರಗೆ ಶಾಲು ಹೊದಿಸಿ ಸನ್ಮಾನಿಸಿ, ಶುಭಾಶೀರ್ವಾದ ಮಾಡಿದ ಘಟನೆ ಯಡಿಯೂರು ದೇವಾಲಯದಲ್ಲಿ ನಡೆಯಿತು.
ಶುಕ್ರವಾರ ಮಧ್ಯಾಹ್ನ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಚುನಾವಣೆಗೆ ನಿಲ್ಲುವ ಮೊದಲು ಕುಣಿಗಲ್ ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಯಡಿಯೂರು ಸಿದ್ದಲಿಂಗೇಶ್ವರನಿಗೆ ಪೂಜೆ ಸಲ್ಲಿಸಲು ಆಗಮಿಸಿದರು. ಇದೇ ವೇಳೆ ಬಿಎಸ್ವೈ ಪುತ್ರ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ ಅವರು ತಮ್ಮ ಮನೆ ದೇವರಾದ ಸಿದ್ದಲಿಂಗೇಶ್ವರ ಸ್ವಾಮಿ ಸನ್ನಿಧಿ ಪೂಜೆಗೆ ಆಗಮಿಸಿದರು. ಇಬ್ಬರು ಮುಖಂಡರು ಶ್ರೀಸ್ವಾಮಿಯಲ್ಲಿ ಪೂಜೆ ಸಲ್ಲಿಸಿದರು. ನಂತರ ವಿಜಯೇಂದ್ರ ಅವರು ಡಾ.ಜಿ.ಪರಮೇಶ್ವರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪರಮೇಶ್ವರ್, ವಿಜಯೇಂದ್ರ ಅವರಿಗೆ ಶಾಲು ಹೊದಿಸಿ ಶುಭ ಹಾರೈಸಿದರು. ಚುನಾವಣೆ ಸಂದರ್ಭದಲ್ಲಿ ಎರಡು ಪಕ್ಷಗಳ ಬಲಿಷ್ಠ ನಾಯಕರು ಸಿದ್ದಲಿಂಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸಮಾಗಮಗೊಂಡಿದ್ದು ವಿಶೇಷವಾಗಿತ್ತು.

Get real time updates directly on you device, subscribe now.

Comments are closed.

error: Content is protected !!