ಸಿದ್ದಗಂಗ ಶ್ರೀಗಳ ಆಶೀರ್ವಾದ ಪಡೆದ ಸುರೇಶ್ ಗೌಡ

76

Get real time updates directly on you device, subscribe now.


ತುಮಕೂರು: ನಗರದ ಸಿದ್ದಗಂಗಾ ಮಠಕ್ಕೆ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರು ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದ ನಂತರ ಮಾತನಾಡಿ, ಶ್ರೀಮಠ ಪವಿತ್ರವಾದ ಕ್ಷೇತ್ರ, ನಾನು ಮೊದಲಿನಿಂದಲೂ ಯಾವುದೇ ಶುಭ ಕಾರ್ಯ ಕೈಗೊಳ್ಳಬೇಕಾದರೆ ಶ್ರೀಮಠಕ್ಕೆ ಬಂದು ಸ್ವಾಮೀಜಿಯವರ ಆಶೀರ್ವಾದ ಪಡೆಯುವುದು ರೂಢಿ, ಹಾಗೆಯೇ ಶ್ರೀಕ್ಷೇತ್ರಕ್ಕೆ ಬಂದು ಹಿರಿಯ ಶ್ರೀಗಳ ಗದ್ದುಗೆ ದರ್ಶನ ಮಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದೇನೆ ಎಂದರು.
ನಾನು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಮುಖ ಕಾರ್ಯ ಮಾಡಬೇಕಾದರೆ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಿದ್ದೆ, ಚುನಾವೆಯಲ್ಲಿ ಸ್ಪರ್ಧೆ ಮಾಡುವಾಗಲೂ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದೆ. ಅದೇ ರೀತಿ ಈಗಲೂ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದೇನೆ. ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದವೂ ನನಗೆ ಸಿಕ್ಕಿದೆ. ಇನ್ನು ಮುಂದೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತನಾಗುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮೈದಾಳ ಗ್ರಾಪಂ ಅಧ್ಯಕ್ಷೆ ಮಾಲಾ ಮಂಜುನಾಥ್, ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಡಿ.ಎನ್.ಶಂಕರ್, ಶಿವಕುಮಾರ್, ರಾಜಶೇಖರ್, ವೈ.ಹೆಚ್. ಹುಚ್ಚಯ್ಯ, ವೈ.ಟಿ. ನಾಗರಾಜು ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!