ಕರೆಂಟ್ ಶಾಕ್ ಗೆ ಮಕ್ಕಳಿಬ್ಬರು ಬಲಿ

356

Get real time updates directly on you device, subscribe now.


ತುಮಕೂರು: ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು ಹೊರ ವಲಯದ ಬೆಳಗುಂಬದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ಸಂಭವಿಸಿದೆ.
ಮೃತ ಮಕ್ಕಳು 8 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಮತ್ತು ಯತೀಶ್ ಎಂದು ಗುರುತಿಸಲಾಗಿದೆ.

ಸಿದ್ದರಾಮೇಶ್ವರ ಬಡಾವಣೆಯಲ್ಲಿ ವಾಸವಿದ್ದ ವೀರಭದ್ರಯ್ಯ ಎಂಬುವರ ಪುತ್ರ ಯತೀಶ್ ಮತ್ತು ಸಿದ್ದಲಿಂಗಯ್ಯ ಅವರ ಪುತ್ರ ಪ್ರಜ್ವಲ್ ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!