ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ನಾಮಿನೇಷನ್

ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಅಭ್ಯರ್ಥಿ

86

Get real time updates directly on you device, subscribe now.


ತುಮಕೂರು: ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ಚುನಾವಣಾಧಿಕಾರಿ ಹೆಚ್.ವಿ.ದರ್ಶನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ತಮ್ಮ ಅಪಾರ ಬೆಂಬಲಿಗರು ಮತ್ತು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆಯೊಂದಿಗೆ ಸಾಗಿ ಬಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇವರಿಗೆ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್, ಪಾಲಿಕೆ ಸದಸ್ಯ ನಯಾಜ್, ಮುಖಂಡರಾದ ಅಫ್ತಾಬ್, ಗುರುಪ್ರಸಾದ್ ಸಾಥ್ ನೀಡಿದರು.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ, ತಾನು ಗೆದ್ದರೆ ಅದು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನ ಗೆಲುವಾಗಿರುತ್ತದೆ ಎಂದು ತಿಳಿಸಿದರು.
ಕಳೆದ 30 ವರ್ಷಗಳಿಂದ ಯೂತ್ ಕಾಂಗ್ರೆಸ್ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಇದುವರೆವಿಗೂ ಪಕ್ಷ ನೀಡಿದ ಎಲ್ಲಾ ಕೆಲಸ ಕಾರ್ಯ ಮಾಡಿಕೊಂಡು ಬರುತ್ತಿದ್ದೇನೆ. ನನ್ನ ಸೇವೆ ಮತ್ತು ಅರ್ಹತೆ ಪರಿಗಣನೆಗೆ ತೆಗೆದುಕೊಂಡು ಸಾಮಾನ್ಯ ಕಾರ್ಯಕರ್ತನಾದ ನನಗೆ ಟಿಕೆಟ್ ನೀಡಿದ್ದು, ನಗರದಲ್ಲಿ ಜನರು ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನನಗೆ ಟಿಕೆಟ್ ಘೋಷಣೆಯಾದಾಗ ತುಮಕೂರು ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಸ್ಪೋಟಗೊಂಡಿತು. ಅದೆಲ್ಲವನ್ನು ಈಗ ಸರಿಪಡಿಸಿಕೊಳ್ಳಲಾಗಿದೆ. ನಮ್ಮ ಗುರುಗಳಾದ ಷಫಿ ಅಹಮದ್ ಅವರು ಆಶೀರ್ವಾದ ಪಡೆದಿದ್ದೇನೆ. ಅವರು ಸದಾ ನನ್ನ ಪರವಾಗಿ ಇದ್ದಾರೆ. ಮಾಜಿ ಶಾಸಕ ರಫಿಕ್ ಅವರೊಂದಿಗೆ ಯಾವುದೇ ಮುನಿಸಿಲಗಲ, ನಮ್ಮ ಕಾಂಗ್ರೆಸ್ ಪಕ್ಷ ಒಂದು ಕುಟುಂಬ ಇದ್ದ ಹಾಗೆ ಎಂದರು.

Get real time updates directly on you device, subscribe now.

Comments are closed.

error: Content is protected !!