ರುಚಿತ ರಾಜ್ಯಕ್ಕೆ ಮೂರನೇ ಟಾಪರ್

198

Get real time updates directly on you device, subscribe now.


ತುಮಕೂರು: ನಗರದ ಸರ್ವೋದಯ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಚಿತ ಎಂ. ವಿಜ್ಞಾನ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
ಸಂಸ್ಥೆಯ ಕಾರ್ಯದರ್ಶಿ ಸೀತರಾಮು, ಜಂಟಿ ಕಾರ್ಯದರ್ಶಿ ಕೆ.ಬಿ.ಸುಬ್ಬರಾವ್, ಪ್ರಾಚಾರ್ಯ ಬಿ.ಎಸ್.ಕಮಲಾಕ್ಷಿ ಅವರು ರ್ಯಾಂಕ್ ವಿಜೇತ ವಿದ್ಯಾರ್ಥಿನಿಗೆ ಸಿಹಿ ತಿನಿಸಿ ಅಭಿನಂದಿಸಿದರು.
ತುರುವೇಕೆರೆ ತಾಲ್ಲೂಕಿನ ಸಂಕಲಾಪುರ ಗ್ರಾಮದ ಮಂಜುನಾಥ್ ಮತ್ತು ವಿಜಯಲಕ್ಷ್ಮಿ ದಂಪತಿ ಪುತ್ರಿ ರುಚಿತ.ಎಂ. ಅವರು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುವ ಬಯಕೆ ವ್ಯಕ್ತಪಡಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!