ಕುಣಿಗಲ್: ರಸ್ತೆ ಅಪಘಾತದಲ್ಲಿ ಮುಖಂಡರೊಬ್ಬರು ಮೃತಪಟ್ಟಿರುವ ಧಾರುಣ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಜಲಧಿಗೆರೆ ರಾಜಣ್ಣ (61) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಚಾಕೇನಹಳ್ಳಿ ಗ್ರಾಮದ ಸಮೀಪ ರಸ್ತೆ ದಾಟುವಾಗ ವೇಗವಾಗಿ ಬಂದ ಬೈಕ್ ಗುದ್ದಿದ್ದು ಕೆಳಗೆ ಬಿದ್ದವರ ಮೇಲೆ ಕಾರು ಹತ್ತಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತರು ಜೆಡಿಎಸ್ ಮುಖಂಡರಾಗಿದ್ದು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು ಎನ್ನಲಾಗಿದೆ. ಯಡಿಯೂರು ವಿಎಸ್ಎಸ್ಎನ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಹೆಸರು ಮಾಡಿದ್ದರು. ಮೃತರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರಿದ್ದು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.
Get real time updates directly on you device, subscribe now.
Prev Post
Next Post
Comments are closed.