ಮನೆಗೆ ನುಗ್ಗಿ ಚಿನ್ನಾಭರಣ ಕಳವು

237

Get real time updates directly on you device, subscribe now.


ಹುಳಿಯಾರು: ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಒಳ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಹುಳಿಯಾರು ಪೇಟೆ ಬೀದಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಇಲ್ಲಿನ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಎಲ್.ಆರ್.ಚಂದ್ರಶೇಖರ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು ಮನೆಯವರೆಲ್ಲರೂ ಬೆಂಗಳೂರಿನ ಆಸ್ಪತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮನೆಯ ಹಿತ್ತಲಿನಿಂದ ಮಹಡಿಯ ಮನೆ ಮೇಲೆ ಹತ್ತಿ ಹಿಂಭಾಗದ ಬಾಗಿಲಿನ ಚಿಲಕ ಮುರಿದು ಒಳ ನುಗ್ಗಿರುವ ಕಳ್ಳರು ಮನೆಯ ಪ್ರತಿ ಕೋಣೆಯ ಕಬೋರ್ಡ್ಗಳ ಬೀಗ ಹೊಡೆದು ಬಟ್ಟೆ ಸೇರಿದಂತೆ ಅದರಲ್ಲಿದ್ದ ಸಾಮಗ್ರಿಗಳನ್ನು ರೂಮಿನ ತುಂಬ ಚೆಲ್ಲಾಡಿ ಬೆಲೆ ಬಾಳುವ ವಸ್ತುಗಳನ್ನು ಹುಡುಕಿ ದೋಚಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.5 ಲಕ್ಷ ರೂ. ನಗದು ಕದ್ದಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿತ್ತು. ಹುಳಿಯಾರು ಪಿಎಸ್ಐ ಮೂರ್ತಿ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಘಟನೆಯ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!