ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಸಿಇಒ

64

Get real time updates directly on you device, subscribe now.


ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹೆಬ್ಬೂರು ಗ್ರಾಮ ಪಂಚಾಯತಿಯ ಮತಗಟ್ಟೆ ಕೇಂದ್ರದಲ್ಲಿ ಧ್ವಜಾರೋಹಣ ನೆರೆವೇರಿಸಿ ನಮ್ಮ ನಡೆ ಮತಗಟ್ಟೆ ತೋರಿಸುವ ಕಡೆ ಎಂಬ ಅಭಿಯಾನದ ಮುಖಾಂತರ ಮತದಾನದ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಮನೆ ಮನೆ ಭೇಟಿ ವೇಳೆಯಲ್ಲಿ ವಿಶೇಷ ಚೇತನರಿಗೆ ಪ್ರಜಾ ಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಗೊಳ್ಳಲು ಎಲ್ಲರ ಸಹಕಾರ ಅತ್ಯಗತ್ಯ. ವಯೋವೃದ್ಧರು, ವಿಕಲಚೇತನ ಮತದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.

ಮತದಾನವು ಪ್ರಜಾ ಪ್ರಭುತ್ವದ ಶ್ರೇಷ್ಠ ದಾನವಾಗಿದ್ದು, ಪ್ರತಿಯೊಬ್ಬರು ತಮ್ಮ ಮತ ಚಲಾಯಿಸುವ ಮುಖಾಂತರ ಮತದಾನ ಹಬ್ಬಕ್ಕೆ ಎಲ್ಲರೂ ಕೈ ಜೋಡಿಸಬೇಕು ಹಾಗೂ ಯಾವುದೇ ಹಣ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು. ಪ್ರತಿ ಶತ ಮತದಾನ ತುಮಕೂರು ಜಿಲ್ಲೆಯ ವಾಗ್ದಾನ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಲು ಪಣ ತೊಡಬೇಕು. ಇದರಿಂದ ಉತ್ತಮ ರಾಷ್ಟ್ರ ನಿರ್ಮಿಸಲು ತಾವೆಲ್ಲರೂ ಸಹಕಾರ ನೀಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯತಿಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಕೈ ಜೋಡಿಸಿ ಪ್ರಜಾ ಪ್ರಭುತ್ವದ ಹಬ್ಬಕ್ಕೆ ತಾವೆಲ್ಲರೂ ಮೇ 10 ರಂದು ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಶಕ್ತಿ ತೋರಿಸುವ ಸುವರ್ಣಾವಕಾಶ ಬಂದಿದೆ. ಹಾಗಾಗಿ ತಾವೆಲ್ಲರೂ ತಪ್ಪದೆ ಮತದಾನ ಮಾಡಬೇಕೆಂದು ವಾಗ್ದಾನ ಮಾಡಿದರು. ಮತದಾನ ಜಾಗೃತಿಗೆ ಪ್ರಮುಖ ಆಕರ್ಷಣೆಯಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿ ಮುಖಾಂತರ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಾದ ಡೊಳ್ಳು ಕುಣಿತ, ವೀರಗಾಸೆ, ಮತದಾನ ಜಾಗೃತಿ ಗೀತೆಗಳ ಮೂಲಕ ಆಟೋ ಪ್ರಚಾರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಎನ್ಆರ್ಎಲ್ಎಂ ಸಿಬ್ಬಂದಿ, ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!