ನುಡಿದಂತೆ ನಡೆಯುವ ಏಕೈಕ ಪಕ್ಷ ಬಿಜೆಪಿ: ಬಿಎಸ್ ವೈ

ರಾಜ್ಯದ ಸಮಗ್ರ ಅಭಿವೃದ್ಧಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ

128

Get real time updates directly on you device, subscribe now.


ಕುಣಿಗಲ್: ರಾಜ್ಯದ ಸಮಗ್ರ ಅಭಿವೃದ್ಧಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಹಲವು ಯೋಜನೆಗಳ ಘೋಷಣೆ ಮಾಡಿದ್ದು ಅವುಗಳ ಅನುಷ್ಠಾನಕ್ಕೆ ಜನತೆ ಬಿಜೆಪಿ ಅಭ್ಯರ್ಥಿ ಬೆಂಬಲಿಸಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮನವಿ ಮಾಡಿದರು.

ಪಟ್ಟಣದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಪರವಾಗಿ ಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿ ಸರ್ವ ಜನರ ಹಿತ ಬಯಸಿದೆ, ಮುಂದಿನ ಐದು ವರ್ಷಕ್ಕೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹಲವು ಮಹತ್ತರ ಯೋಜನೆಗಳ ಅನುಷ್ಠಾನದ ಪ್ರಣಾಳಿಕೆ ಘೋಷಣೆ ಮಾಡಿದ್ದು, ನುಡಿದಂತೆ ನಡೆಯುವ ಏಕೈಕ ಪಕ್ಷ ಬಿಜೆಪಿಯಾಗಿದ್ದು, ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲು ಬಿಜೆಪಿ ಬೆಂಬಲಿಸಬೇಕೆಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಡಬಲ್ ಇಂಜೀನ್ ಸರ್ಕಾರ ಅಭಿವೃದ್ಧಿ ನಿಟ್ಟಿನಲ್ಲಿ ಕೈಗೊಂಡ ಹಲವು ಕಾರ್ಯಗಳಿಂದ 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವುದು ನಿಶ್ಚಿತವಾಗಿದೆ. ಬಹುಮತದ ಮೇಲೆ ಬಿಜೆಪಿ ಸರ್ಕಾರ ರಚನೆ ಮಾಡುವುದರಲ್ಲಿ ಅನುಮಾನ ಇಲ್ಲ. ತಾಲೂಕಿನ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಕುಣಿಗಲ್ನಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಗೆಲ್ಲಿಸಬೇಕೆಂದರು.
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆಯಾದಾಗಿನಿಂದ ಪ್ರಚಾರದಿಂದ ದೂರ ಉಳಿದಿದ್ದ ಬಿಜೆಪಿ ಟಿಕೆಟ್ ಆಕಾಂಕ್ಷಿತರಾಗಿದ್ದ ರಾಜೇಶ್ ಗೌಡ ಪ್ರಚಾರದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಮಾಜಿ ಸಂಸದ ಎಸ್.ಪಿ.ಮುದ್ದಹನುಮೇ ಗೌಡ, ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಬಿ.ಸುರೇಶ್ಗೌಡ, ಉಸ್ತುವಾರಿ ನಾಗೇಂದ್ರ ಶರ್ಮ ಸೇರಿದಂತೆ ಮುಖಂಡರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!