ಮೋದಿ ಆಡಳಿತದಿಂದಾಗಿ ದೇಶ ಸುರಕ್ಷಿತ: ಶಾ

ಮತ್ತೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ

100

Get real time updates directly on you device, subscribe now.


ಗುಬ್ಬಿ: ಗುಬ್ಬಿಯಲ್ಲಿ ಎಸ್.ಡಿ.ದಿಲೀಪ್ ಕುಮಾರ್ ಶಾಸಕರಾಗುವ ಮೂಲಕ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಪಟ್ಟಣದಲ್ಲಿ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಬಸ್ ನಿಲ್ದಾಣದ ವರೆಗೆ ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ಪರವಾಗಿ ರೋಡ್ ಶೋ ಮಾಡಿ ಮತ ಯಾಚನೆ ಮಾಡಿ ಮಾತನಾಡಿ, ಮುಸ್ಲಿಮರಿಗಿದಂತಹ ಶೇ.4 ಮೀಸಲಾತಿಯನ್ನು ಒಕ್ಕಲಿಗ ದಲಿತ, ಲಿಂಗಾಯುತ ಸೇರಿದಂತೆ ಇನ್ನಿತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಿದೆ ಎಂದರು.

ನರೇಂದ್ರ ಮೋದಿ ಅವರ ಆಡಳಿತದಿಂದಾಗಿ ದೇಶ ಸುರಕ್ಷಿತವಾಗಿದೆ, ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದು, ಈ ಬಾರಿಯೂ ಬಿಜೆಪಿಯ ಕಮಲ ಅರಳುವುದು ಸತ್ಯ. ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ, ರೈತರು ಬೆಳೆಯುವಂತಹ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸಹ ನಮ್ಮ ಸರಕಾರ ಬದ್ಧವಾಗಿದೆ ಎಂದರು.

ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ, ತಾಲೂಕಿನಲ್ಲಿ ಬದಲಾವಣೆಯನ್ನು ತಾಲೂಕಿನ ಜನರು ಕೇಳುತ್ತಿದ್ದಾರೆ. ಖಂಡಿತವಾಗಿಯೂ ಈ ಬಾರಿ ಬಿಜೆಪಿ ತಾಲೂಕಿನಲ್ಲಿ ಹಾಗೂ ರಾಜ್ಯದಲ್ಲಿ ಆಡಳಿತಕ್ಕೆ ಬರುವುದು ಸತ್ಯ, ಸುಸಜ್ಜಿತ ಆಸ್ಪತ್ರೆಗಳು, ಸರಕಾರಿ ಶಾಲೆಗಳು, ಪ್ರತಿಯೊಂದು ಕೊಳವೆ ಬಾವಿಗೆ, ಟಿಸಿ ಸೇರಿದಂತೆ ರೈತರ ಪರವಾಗಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದೇವೆ ಹಾಗೂ ಅಮಿತ್ ಶಾ ಜಿ ಅವರಿಗೆ ನಮ್ಮ ತಾಲೂಕಿನ ಮನವಿ ಏನೆಂದರೆ ಕೊಬ್ಬರಿ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಮನವಿ ಮಾಡಿದರು.

ನಾನು ಗೆದ್ದಲ್ಲಿ ಕೇವಲ ನಾನು ಮಾತ್ರ ಶಾಸಕನಾಗದೆ ನಿಮ್ಮ ಸೇವಕನಾಗಿ ಸೇವೆ ಮಾಡುತ್ತೇನೆ. ತಾವೆಲ್ಲರೂ ಶಾಸಕರಂತೆ ತಾಲೂಕಿನಲ್ಲಿ ಇರುತ್ತೀರ, ಹಾಗಾಗಿ ಮೇ 10 ರ ಚುನಾವಣೆಯವರೆಗೂ ಸಹ ಕಾರ್ಯಕರ್ತರು ತಮ್ಮ ಬೂತ್ ಮಟ್ಟದಲ್ಲಿ ಕೆಲಸ ಮಾಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ, ಸಂಸದ ಜಿ.ಎಸ್.ಬಸವರಾಜು, ಚುನಾವಣಾ ಉಸ್ತುವಾರಿ ಸಂಜಯ್ ಬಾಟ್ಯ, ಜಿಲ್ಲಾಧ್ಯಕ್ಷ ರವಿಶಂಕರ್, ಜಿಲ್ಲಾ ಕಾರ್ಯದರ್ಶಿ ಭೈರಪ್ಪ, ತಾಲೂಕು ಅಧ್ಯಕ್ಷ ಪಂಚಾಕ್ಷರಿ, ಮುಖಂಡರಾದ ಸಾಗರನಹಳ್ಳಿ ವಿಜಯ್ ಕುಮಾರ್, ನಂಜೇಗೌಡ, ಚಂದ್ರಶೇಖರ ಬಾಬು ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!