7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ: ಹೆಬ್ಬಾಕ

145

Get real time updates directly on you device, subscribe now.


ತುಮಕೂರು: ಜಿಲ್ಲೆಯಲ್ಲಿ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದರು.
ನಗರದ ಬಿ.ಹೆಚ್.ರಸ್ತೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಮಕೂರು ಸಂಘಟನಾ ಜಿಲ್ಲೆಯಲ್ಲಿ ಬಿಜೆಪಿ ಈ ಬಾರಿ ಏಳು ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು ರಾಜ್ಯದಲ್ಲಿ ಬಹುಮತದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬಿಜೆಪಿ ಭದ್ರ ನೆಲೆ ಹೊಂದಿದ್ದು ಶ್ರದ್ಧಾವಂತ ಕಾರ್ಯಕರ್ತರ ಪಡೆಯೊಂದಿಗೆ ಉತ್ತಮವಾಗಿ ಪ್ರಚಾರ ಕಾರ್ಯ ನಡೆಸಿದ ಫಲವಾಗಿ ಬಿಜೆಪಿ ಏಳು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮುನ್ಸೂಚನೆ ಕಂಡು ಬಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಉತ್ತಮ ಜನಪರ ಯೋಜನೆ ಅರಿತ ಮತದಾರರು ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು. ಬಂಡಾಯದ ಯಾವುದೇ ಪರಿಣಾಮ ಪಕ್ಷಕ್ಕೆ ಆಗುವುದಿಲ್ಲ. ಜನ ಪಕ್ಷದ ಕಾರ್ಯಕ್ರಮ ಆಧರಿಸಿ ಮತ ನೀಡುತ್ತಾರೆ ಹೊರತು ಯಾವುದೇ ಬಂಡಾಯಗಾರರ ಮಾತಿಗೆ ಮನ್ನಣೆ ನೀಡುವುದಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಸದೃಢ ಸಂಘಟನೆ ಮಾಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲ ಮತದಾರರಿಗೆ ಪಕ್ಷದ ಪರವಾಗಿ, ಪಕ್ಷದ ನಾಯಕರ ಪರವಾಗಿ ಕೃತಜ್ಞತೆ ಹೇಳುವುದಾಗಿ ತಿಳಿಸಿದರು.
ಪಾಲಿಕೆ ಮಾಜಿ ಮೇಯರ್ ಕೃಷ್ಣಪ್ಪ, ಸದಸ್ಯ ರಮೇಶ್, ಟೂಡಾ ಮಾಜಿ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ, ಮಲ್ಲಿಕಾರ್ಜುನ್ ಇನ್ನಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!