ಗುಬ್ಬಿ: ಒಂದೇ ರಾತ್ರಿಯಲ್ಲಿ ಮೂರು ದೇವಾಲಯಗಳಿಗೆ ಖದೀಮರು ಕನ್ನ ಹಾಕಿದ್ದಾರೆ.
ತಾಲೂಕಿನ ದೊಡ್ಡಗುಣಿ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ದೇವಾಲಯ, ಶ್ರೀಕೆಂಪಮ್ಮ ದೇವಿ ದೇವಾಲಯ ಹಾಗೂ ಶ್ರೀಮಹದೇಶ್ವರ ಸ್ವಾಮಿ ದೇವಾಲಯದ ಬೀಗ ಹೊಡೆದು ಸುಮಾರು 50 ಸಾವಿರಕ್ಕೂ ಹೆಚ್ಚು ಹಣವನ್ನು ಹುಂಡಿಯಲ್ಲಿ ಕಳವು ಆಗಿರುವ ಘಟನೆ ನಡೆದಿದ್ದು, ಈ ಘಟನೆಯಿಂದ ಗ್ರಾಮದಲ್ಲಿ ಹಾಗೂ ಅಕ್ಕಪಕ್ಕದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ಪೊಲೀಸ್ ಇಲಾಖೆಯು ಈ ಭಾಗಕ್ಕೆ ಬೀಟ್ ಪೊಲೀಸ್ ಹಾಕುವ ಮೂಲಕ ರಕ್ಷಣೆ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದೇವಾಲಯಗಳಿಗೆ ಕನ್ನ
Get real time updates directly on you device, subscribe now.
Next Post
Comments are closed.