ಮಧುಗಿರಿ: ಕೆ.ಎನ್.ರಾಜಣ್ಣ ಅವರನ್ನು ಸಂಪುಟ ದರ್ಜೆ ಸಚಿವರನ್ನಾಗಿ ಮಾಡಬೇಕೆಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಿದ್ದಗಂಗಪ್ಪ ತಿಳಿಸಿದರು.
ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ತಾಲ್ಲೂಕು ಮಾದಿಗ ದಂಡೋರ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಹಿಂದ ಮತಗಳನ್ನು ಕಾಂಗ್ರೆಸ್ ನತ್ತ ಸೆಳೆಯುವಲ್ಲಿ ಕೆ.ಎನ್.ರಾಜಣ್ಣ ನವರ ಶ್ರಮ ಅಪಾರವಾಗಿದ್ದು, ಸಹಕಾರ ಕ್ಷೇತ್ರದಲ್ಲಿ 30 ವರ್ಷಕ್ಕೂ ಹೆಚ್ಚು ಅನುಭವವಿದೆ. ಜಿಲ್ಲೆಯಲ್ಲೇ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿರುವ ಇವರನ್ನು ಸಚಿವರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದಾಪುರ ರಂಗಶಾಮಯ್ಯ ಮಾತನಾಡಿ, ಮಧುಗಿರಿ ಕ್ಷೇತ್ರದ ಅಭಿವೃದ್ಧಿಗೆ ಕೆ.ಎನ್.ರಾಜಣ್ಣ ನವರ ಕೊಡುಗೆ ಹೆಚ್ಚಾಗಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಂಪುಟ ದರ್ಜೆ ಸಚಿವರನ್ನಾಗಿ ಮಾಡಬೇಕು. ನಮ್ಮ ಸಮುದಾಯದ ಹಿರಿಯ ರಾಜಕಾರಣಿ ಕೆ.ಹೆಚ್.ಮುನಿಯಪ್ಪ ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದುಡಿದ್ದಿದ್ದಾರೆ. ಅವರ ಸೇವೆ ಗುರುತಿಸಿ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ತಿಳಿಸಿದರು.
ಮುಖಂಡ ದೊಡ್ಡೇರಿ ಕಣೀಮಯ್ಯ ಮಾತನಾಡಿ, ನಮ್ಮ ತಾಲ್ಲೂಕಿನಲ್ಲಿ ಕೆ.ಎನ್.ರಾಜಣ್ಣ ನವರು ಸಮುದಾಯದ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರು ಸಚಿವರಾದರೆ ಮಧುಗಿರಿ ಜಿಲ್ಲಾ ಕೇಂದ್ರವಾಗಿ ಕ್ಷೇತ್ರವು ಅಭಿವೃದ್ಧಿಯಾಗುತ್ತದೆ ಎಂದರು.
ಜೀವಿಕ ಮಂಜುನಾಥ್, ಎಪಿಎಂಸಿ ಮಾಜಿ ನಿರ್ದೇಶಕಿ ಚಿಕ್ಕಮ್ಮ, ತಾಪಂ ಮಾಜಿ ಸದಸ್ಯ ರಾಮಣ್ಣ, ಮುಖಂಡರಾದ ದೇವರಾಜು, ದೊಡ್ಡೇರಿ ಡಿ.ಎಲ್.ನರಸಿಂಹಮೂರ್ತಿ, ಆರ್.ಸಣ್ಣರಾಮಣ್ಣ, ಕಸಿನಾಯಕನ ಹಳ್ಳಿ ರಾಮಾಂಜಿ, ಕೊಟಗಾರಲಹಳ್ಳಿ ಗ್ರಾಪಂ ಅಧ್ಯಕ್ಷ ನರಸಿಂಹಯ್ಯ, ಗುತ್ತಿಗೆದಾರ ಹನುಮಂತರಾಯಪ್ಪ, ಡಿ.ಟಿ.ರಮೇಶ್ ಮುಂತಾದವರು ಇದ್ದರು.
Comments are closed.