ಬಸ್ ಗೆ ಟಿಟಿ ಡಿಕ್ಕಿ- ಇಬ್ಬರ ದುರ್ಮರಣ

2,011

Get real time updates directly on you device, subscribe now.


ಕುಣಿಗಲ್: ರಸ್ತೆಯಲ್ಲಿ ನಿಂತಿದ್ದ ಬಸ್ ಗೆ ವೇಗವಾಗಿ ಬಂದ ಟೆಂಪೋ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡ ಘಟನೆ ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯಹೆದ್ದಾರಿ 33ರ ಡಿ.ಹೊಸಹಳ್ಳಿ ಗ್ರಾಮದ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.

ಮೃತಪಟ್ಟವರನ್ನು ಸಿಂಧನೂರಿನ ಶಶಿಕಲಾ (65) ಟಿಟಿ ವಾಹನ ಚಾಲಕ ವೀರೇಶ್ (32) ಎಂದು ಗುರುತಿಸಲಾಗಿದೆ. ಶಶಿಕಲಾ ಕುಟುಂಬದವರು ಮೈಸೂರು ಪ್ರವಾಸಕ್ಕೆಂದು ಟಿಟಿ ವಾಹನದಲ್ಲಿ ಸಿಂಧನೂರಿನಿಂದ ಹೊರಟು ಕುಣಿಗಲ್ ತಾಲೂಕಿನ ಮೂಲಕ ಸಾಗುವಾಗ ಡಿ.ಹೊಸಹಳ್ಳಿ ಗ್ರಾಮದ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೆ ಚಾಲಕ ಮೃತಪಟ್ಟರೆ, ಚಿಕಿತ್ಸೆಗೆ ಶಶಿಕಲಾ ಸಾಗಿಸುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಟಿಟಿ ವಾಹನದಲ್ಲಿದ್ದ ದಿಲೀಪ್ ಕುಮಾರ, ಆನಂದಕುಮಾರ, ಪ್ರಿಯಾ, ಪ್ರತೀಕ್ಷಾ ಇತರರು ಗಾಯಗೊಂಡಿದ್ದು ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಳ್ಳೂರು ಕ್ರಾಸ್ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೆಳ್ಳಂಬೆಳಗ್ಗೆಯೆ ಗ್ರಾಮದಲ್ಲಿನ ಅಪಘಾತದ ಸದ್ದು ಕೇಳಿದೊಡನೆ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿ, ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹುಲಿಯೂರು ದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉರುಳಿ ಬಿದ್ದ ಬಸ್
ತಮಿಳುನಾಡು ರಾಜ್ಯದ ಸೇಲಂನಿಂದ ಶೃಂಗೇರಿಗೆ ಹೊರಟಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದಿದ್ದು ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಮಂದಿಯ ಪೈಕಿ ಯಾರಿಗೂ ಪ್ರಾಣಪಾಯವಾಗದೆ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಗವಿಮಠ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.

Get real time updates directly on you device, subscribe now.

Comments are closed.

error: Content is protected !!