ಪ್ರಣಾಳಿಕೆ ಜಾರಿಗೆ ಸಿದ್ಧತೆಯಾಗಿದೆ: ಶ್ರೀನಿವಾಸ್

96

Get real time updates directly on you device, subscribe now.


ಗುಬ್ಬಿ: ಕಾಂಗ್ರೆಸ್ ಪ್ರಣಾಳಿಕೆ ಜಾರಿಗೆ ತರಲು ಎಲ್ಲಾ ರೀತಿಯ ಸಿದ್ಧತೆಯಾಗಿದೆ. ಒಂದಷ್ಟು ಅವಕಾಶ ನೀಡಿದಾಗ ಖಂಡಿತವಾಗಿಯೂ ಸಾರ್ವಜನಿಕರಿಗೆ ಅದರಿಂದ ಅನುಕೂಲವಾಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಶಾಸಕರ ಕಚೇರಿಗೆ ಐದನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಶ್ರೀನಿವಾಸ್ ಅವರನ್ನು ಅವರ ಕಾರ್ಯಕರ್ತರು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿಯ ದುರಾಡಳಿತದಿಂದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಅಧಿಕಾರಕ್ಕೆ ಬಂದಿದೆ. ಖಂಡಿತವಾಗಿಯೂ ರಾಜ್ಯಕ್ಕೆ ಒಳಿತಾಗುವಂತಹ ಯೋಜನೆಗಳನ್ನು ನಮ್ಮ ಸರ್ಕಾರ ನೀಡುತ್ತದೆ. ನಾನು ನಾಲ್ಕು ಬಾರಿ ಶಾಸಕರಾಗಿದ್ದರು, ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕಾದ ಸ್ಥಿತಿ ಒದಗಿತ್ತು. ಈ ಬಾರಿ ಕಾಂಗ್ರೆಸ್ ಶಾಸಕನಾಗಿದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದು ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಕ್ಕಂತಾಗುತ್ತದೆ ಎಂದರು.

ಪ್ರಣಾಳಿಕೆಯ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನವರು ಪ್ರತಿಭಟನೆ ಮಾಡುತ್ತಾರೆ ಎಂದರೆ ಅವರಿಗೆಲ್ಲ ಸೋತಿರುವ ಹತಾಶೆ ಮನೋಭಾವನೆ ಕಾಡುತ್ತಿದೆ. ಯಾವುದೇ ಒಂದು ಯೋಜನೆ ಸಾಗಬೇಕಾದರೆ ಒಂದಷ್ಟು ಕಾಲಾವಕಾಶ ಬೇಕಾಗಿದೆ. ಈ ಬಾರಿಯ ಬಜೆಟ್ ನಂತರ ಹಣ ಮೀಸಲಿಟ್ಟು ಸರ್ಕಾರ ಹಾಕಿಕೊಂಡಿರುವ ಯೋಜನೆ ಮತ್ತು ಪ್ರಣಾಳಿಕೆ ಎಲ್ಲರಿಗೂ ತಲುಪಿಸುವ ಕೆಲಸ ಮಾಡೇ ಮಾಡುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ಮುಖಂಡರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!