ಬೈಕ್ ಗೆ ಲಾರಿ ಡಿಕ್ಕಿ: ವಿಪ್ರೋ ಉದ್ಯೋಗಿ ಸಾವು

366

Get real time updates directly on you device, subscribe now.


ತುಮಕೂರು: ನಗರದ ಹೊರ ವಲಯದ ಗೂಳೂರು ಬಳಿ ಶುಕ್ರವಾರ ಬೆಳಗ್ಗೆ ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಹೆಬ್ಬೂರು ಹೋಬಳಿ ಕಾಳಿಂಗಯ್ಯನಪಾಳ್ಯದ ಯೋಗೀಶ್ (34) ಮೃತರು. ಅಂತರಸನಹಳ್ಳಿಯಲ್ಲಿರುವ ವಿಪ್ರೋ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಮನೆಯಿಂದ ತೆರಳುತ್ತಿದ್ದ ಸಮಯದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಬ್ ಇನ್ಸ್ ಸ್ಪೆಕ್ಟರ್ ಪ್ರಸನ್ನಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!