ಕೊಬ್ಬರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

247

Get real time updates directly on you device, subscribe now.


ಚಿಕ್ಕನಾಯಕನಹಳ್ಳಿ: ಪಟ್ಟಣದ ಕೊಬ್ಬರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರೊಂದಿಗೆ ಚರ್ಚಿಸಿದ ಅವರು ರೈತರಿಗೆ ಅನುಕೂಲಕ್ಕಾಗಿ ತೆರೆದ ನ್ಯಾಫೆಡ್ ಕೇಂದ್ರದಲ್ಲಿ ಕೊಬ್ಬರಿ ಖರೀದಿಗೆ ಮೊದಲ ಅದರ ಗುಣಮಟ್ಟ ಪರೀಕ್ಷಿಸಿ ಗ್ರೇಡ್ ನೀಡಲಾಗುತ್ತದೆ. ಆದರಿಂದ ರೈತರು ಗುಣಮಟ್ಟದ ಕೊಬ್ಬರಿ ತರಬೇಕು ಎಂದು ಮನವಿ ಮಾಡಿದರು.

ಕೊಬ್ಬರಿ ಖರೀದಿ ಕೇಂದ್ರದಲ್ಲಿ ಅವ್ಯವಹಾರವಾಗದಂತೆ ಹಾಗೂ ರೈತರಿಗೆ ಸಮಸ್ಯೆ ನೀಡದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕಲ್ಪಶ್ರೀ, ತಹಶೀಲ್ದಾರ್ ಅರ್ಚನಾ ಭಟ್, ಕ.ರಾ.ಸ.ಮಾ.ಮ.ಮ ನಿಯಮಿತದ ಶಾಖಾ ವ್ಯವಸ್ಥಾಪಕ ಕಾರ್ತಿಕ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಚೈತ್ರ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!