ಮೂಲಸೌಕರ್ಯ ಕೊರತೆಯಾಗದಂತೆ ಕ್ರಮ: ಎಂಟಿಕೆ

161

Get real time updates directly on you device, subscribe now.


ತುರುವೇಕೆರೆ: ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಮೂಲ ಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ತಾಲೂಕಿನ ಬಡಗರಹಳ್ಳಿ ಬಳಿ ಸಣ್ಣ ನೀರಾವರಿ ಕೋಟಿ ರೂ. ವೆಚ್ಚದ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಬಡಗರಹಳ್ಳಿ- ದೇವನಾಯಕನ ಹಳ್ಳಿ ರಸ್ತೆ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ ಅವಶ್ಯವಿತ್ತು. ಈ ಹಿನ್ನಲೆಯಲ್ಲಿ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಚಾಲನೆ ದೊರಕಿಸಿದ್ದೇನೆ. ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ನಿರ್ವಹಣೆ ಮಾಡುವತ್ತ ಚಿತ್ತಹರಿಸಲಿ, ಬಡಗರಹಳ್ಳಿ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣದಿಂದ ದೇವನಾಯಕನ ಹಳ್ಳಿ ಸೇರಿದಂತೆ ಈ ಮಾರ್ಗವಾಗಿ ಸಂಚರಿಸುವ ರೈತಾಪಿಗಳಿಗೆ ಅನುಕೂಲವಾಗಲಿದೆ ಎಂದರು.

ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ವಿಜಯಕುಮಾರ್, ಗುತ್ತಿಗೆದಾರ ತ್ಯಾಗರಾಜ್, ವೀರಶೈವ ಮುಖಂಡ ಹೆಡಗೀಹಳ್ಳಿ ವಿಶ್ವನಾಥ್, ಅಶೋಕ್, ರಂಗಸ್ವಾಮಿ, ಗ್ರಾಪಂ ಸದಸ್ಯರಾದ ನಾಗೇಂದ್ರ, ಮಂಜುನಾಥ್, ಕಿಟ್ಟಪ್ಪ ಮತ್ತಿತರಿದ್ದರು.

Get real time updates directly on you device, subscribe now.

Comments are closed.

error: Content is protected !!