ನಾಗೇಶ್ ಅಂತಿಮ ನಮನ ದರ್ಶನ ಪಡೆದ ಜಿ.ಪರಮೇಶ್ವರ್

493

Get real time updates directly on you device, subscribe now.


ತುರುವೇಕೆರೆ: ತಾಲೂಕಿನ ಕೆ.ಹೊಸಹಳ್ಳಿ ಗ್ರಾಮಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಸಿ.ಎಸ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಂಗತ ಹೆಚ್.ಕೆ.ನಾಗೇಶ್ ಅವರ ಅಂತಿಮ ದರ್ಶನ ಪಡೆದರು.
ಭಾನುವಾರ ಹೃದಯಾಘಾತದಿಂದ ಮೃತಪಟ್ಟ ಸಿ.ಎಸ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಕೆ.ನಾಗೇಶ್ ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಆನಂತರ ಶಾಸಕ ಕೆ.ಷಡಕ್ಷರಿ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಬೆಮೆಲ್ ಕಾಂತರಾಜ್, ಗೀತಾ ರಾಜಣ್ಣ, ಬಿ.ಎಸ್.ವಸಂತ ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ ಅವರು ಹೆಚ್.ಕೆ.ನಾಗೇಶ್ ಅವರ ನಿಧನ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಹಾಗೂ ಬಂಧು ಬಳಗಕ್ಕೆ ಅವರ ಅಗಲಿಕೆ ಸಹಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಸಿ.ಎಸ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿ. ಹೆಚ್.ಕೆ.ನಾಗೇಶ್ ಅವರ ಅಂತಿಮ ದರ್ಶನ ಪಡೆಯಲು ಡಾ.ಜಿ.ಪರಮೇಶ್ವರ್ ಆಗಮಿಸಿದ ವೇಳೆ ಅವರ ಪತ್ನಿ ತೇಜಾವತಿ ಹಾಗೂ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತು.

ಸ್ವಾಮೀಜಿ ಭೇಟಿ: ಹೊಸದುರ್ಗ ತಾಲೂಕಿನ ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಸಹ ದಿ.ಹೆಚ್.ಕೆ.ನಾಗೇಶ್ ಅವರ ಅಂತಿಮ ದರ್ಶನ ಪಡೆದರು. ಅವರ ಕುಟುಂಬ ವರ್ಗ ಹಾಗೂ ಸಮಾಜ ಬಂಧುಗಳಿಗೆ ಸಾಂತ್ವನ ಹೇಳಿದರು.

ಶಾಸಕರಾದ ಎಂ.ಟಿ.ಕೃಷ್ಣಪ್ಪ, ಕೆ.ಷಡಕ್ಷರಿ, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇ ಗೌಡ, ಮಾಜಿ ಎಂಎಲ್ ಸಿ ಬೆಮೆಲ್ ಕಾಂತರಾಜ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ರಾಜಣ್ಣ, ಬೆಸ್ಕಾಂ ಮಾಜಿ ನಿರ್ದೇಶಕ ಬಿ.ಎಸ್.ವಸಂತಕುಮಾರ್, ಜಿಪಂ ಮಾಜಿ ಸದಸ್ಯರಾದ ಎನ್.ಆರ್.ಜಯರಾಮ್, ಚೌದ್ರಿ ರಂಗಪ್ಪ, ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್, ಯುವ ಮುಖಂಡರಾದ ಕಲ್ಕೆರೆ ರಾಘು, ಮಹೇಂದ್ರ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.

Get real time updates directly on you device, subscribe now.

Comments are closed.

error: Content is protected !!