ತುಮಕೂರು ಜಿಪಂ ನೂತನ ಸಿಇಓ ಜಿ.ಪ್ರಭು

1,160

Get real time updates directly on you device, subscribe now.


ತುಮಕೂರು: ಜಿಲ್ಲಾ ಪಂಚಾಯತ್ ಸಿಇಓ ಆಗಿ ಜಿ.ಪ್ರಭು ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್ 2018 ಬ್ಯಾಚ್ ನ ಜಿ.ಪ್ರಭು ಅವರು ಚಿಕ್ಕಮಂಗಳೂರು ಜಿಪಂ ಸಿಇಒ ಆಗಿ 2 ವರ್ಷ ಕಾರ್ಯ ನಿರ್ವಹಿಸಿ ಈಚೆಗಷ್ಟೇ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾಗಿ ನೇಮಕವಾಗಿದ್ದರು.
ಜಿ.ಪ್ರಭು ಅವರು ಚಿಕ್ಕಮಗಳೂರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬಂದ ಮೇಲೆ ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದರು. ಜನಸ್ನೇಹಿ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಿದ್ದರು. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆರೆಗಳ ಅಭಿವೃದ್ಧಿ, ಸರ್ಕಾರಿ ಶಾಲೆಗಳಿಗೆ ಸಿಂಥೆಟಿಕ್ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಹಾಲಿ ಜಿಪಂ ಸಿಇಓ ಆಗಿದ್ದ ಡಾ.ವಿದ್ಯಾಕುಮಾರಿ ಅವರು ಕಳೆದ ಎರಡು ವರ್ಷದಿಂದ ಜಿಲ್ಲೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿ ಜನಮನ್ನಣೆ ಗಳಿಸಿದ್ದರು. ಇದೀಗೆ ತುಮಕೂರು ಜಿಪಂ ಸಿಇಓ ಆಗಿ ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

Get real time updates directly on you device, subscribe now.

Comments are closed.

error: Content is protected !!