ಹಾವು ಕಚ್ಚಿ ಮಹಿಳೆ ಸಾವು

9,412

Get real time updates directly on you device, subscribe now.


ಗುಬ್ಬಿ: ಆಕಸ್ಮಿಕವಾಗಿ ಹಾವು ಕಚ್ಚಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ.

ಕಡಬ ಹೋಬಳಿ ಅಂಬಾರಪುರ ಗ್ರಾಮದ ಶಿಕ್ಷಕ ದಯಾನಂದ ಸರಸ್ವತಿ ಅವರ ಪತ್ನಿ ರಾಧಾಮಣಿ ಗುರುವಾರ ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಹಾವು ಕಚ್ಚಿತ್ತು. ತಕ್ಷಣ ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆ ತಂದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಆಕಸ್ಮಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಾವು ಕಚ್ಚಿ ಸತ್ತಿರುವುದರಿಂದ ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಶವ ನೀಡಲಾಗುವುದು ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಬಿ.ಆರತಿ ಹಾಗೂ ಪೊಲೀಸರು ಬಂದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!