ಶಿಥಿಲಾವಸ್ಥೆಯಲ್ಲಿ ಶಾಲಾ ಗ್ರಂಥಾಲಯ ಕೊಠಡಿ

ಕಾಯಕಲ್ಪಕ್ಕೆ ಚೇತನ್ ಕುಮಾರ್ ಒತ್ತಾಯ

274

Get real time updates directly on you device, subscribe now.

ತುಮಕೂರು: ಶಿರಾ ತಾಲ್ಲೂಕಿನ ಲಿಂಗದಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಗ್ರಂಥಾಲಯ ಕೊಠಡಿ ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಅಪಾಯದ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಸಮಾಜ ಸೇವಕ, ಜೆಡಿಎಸ್ ಮುಖಂಡ ಲಿಂಗದಹಳ್ಳಿ ಚೇತನ್ ಕುಮಾರ್ ತಿಳಿಸಿದ್ದಾರೆ.

ಕಟ್ಟಡದ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟಿದೆ, ಮೇಲ್ಚಾವಣಿಯ ಬಹುತೇಕ ತೊಲೆ ಮುರಿದಿದೆ. ಯಾವುದೇ ಸಂದರ್ಭದಲ್ಲಿ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬೀಳುವ ಸಾಧ್ಯತೆ ಇದೆ ಎಂದಿದ್ದಾರೆ.

ಗ್ರಂಥಾಲಯ ಕೊಠಡಿ ನವೀಕರಿಸುವ ಅವಶ್ಯಕತೆ ಇದ್ದು, ಸಮಾಜ ಸೇವಕ ಲಿಂಗದಹಳ್ಳಿ ಚೇತನ್ ಕುಮಾರ್ ಅವರು ವಿಧಾನ ಪರಿಷತ್ ಸದಸ್ಯ ಕೆ..ತಿಪ್ಪೇಸ್ವಾಮಿ ಅವರನ್ನು ಭೇಟಿ ಮಾಡಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ವಿಧಾನ ಪರಿಷತ್ ಸದಸ್ಯರ ವಿಶೇಷ ಅನುದಾನದಡಿ ಗ್ರಂಥಾಲಯ ಕೊಠಡಿ ಅಭಿವೃದ್ಧಿಗೆ ಸಹಕರಿಸುವಂತೆ ಲಿಂಗದಹಳ್ಳಿ ಚೇತನ್ ಕುಮಾರ್ ಮನವಿ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಕೆ..ತಿಪ್ಪೇಸ್ವಾಮಿ ಅವರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ.

 

Get real time updates directly on you device, subscribe now.

Comments are closed.

error: Content is protected !!