ಸಿಎಲ್ ಪಿ ಸಭೆಯಲ್ಲಿ ಶಾಸಕರು ಅಸಮಾಧಾನ ಹೊರ ಹಾಕಿಲ್ಲ: ಪರಂ

104

Get real time updates directly on you device, subscribe now.


ತುಮಕೂರು: ಸಿಎಲ್ ಪಿ ಸಭೆಯಲ್ಲಿ ಶಾಸಕರು ಯಾವುದೇ ಅಸಮಾಧಾನ ಹೊರಹಾಕಿಲ್ಲ. ಕೆಲವು ಶಾಸಕರು ಸಿಎಂಗೆ ಪತ್ರ ಬರೆದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಕೇಳಿಕೊಂಡಿದ್ರು, ಹಿಂದಿನ ಶಾಸಕಾಂಗ ಪಕ್ಷದ ಸಭೆ ಅರ್ಧದಲ್ಲೇ ನಿಂತಿತ್ತು. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ನಿಂತಿತ್ತು, ಹಾಗಾಗಿ ಶಾಸಕರು ಪತ್ರ ಬರೆದಿದ್ದರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪತ್ರ ಬರೆಯೋದು ಅಷ್ಟೊಂದು ಸೂಕ್ತ ಅಲ್ಲ ಎಂದು ಸಿಎಂ ಶಾಸಕರಿಗೆ ಸೂಚಿಸಿದ್ದಾರೆ. ಮೌಖಿಕವಾಗಿ ಹೇಳಿದ್ರೆ ನಾನು ಸಿಎಲ್ ಪಿ ಕರೆಯುತ್ತಿದ್ದೆ, ಪತ್ರ ಬರೆದು ಸಹಿ ಅಭಿಯಾನ ಮಾಡೋ ಸಂಪ್ರದಾಯ ಬೇಡ ಎಂದು ಸಿಎಂ ತಾಕೀತು ಮಾಡಿದ್ದಾರೆ. ನಮಗೆ ಗೊತ್ತಾಗದೆ ಪತ್ರ ಬರೆದು ತಪ್ಪು ಮಾಡಿದ್ದೇವೆ ಎಂದು ಶಾಸಕರು ಕ್ಷಮೆ ಕೇಳಿದ್ದಾರೆ. ಆದಾದ ಮೇಲೆ ಅವರ ಶಾಸಕರ ಸಮಸ್ಯೆ ಚರ್ಚೆಯಾದವು ಎಂದು ತಿಳಿಸಿದರು.

ಸಚಿವರು ಇನ್ನೂ ಹೆಚ್ಚಿನದಾಗಿ ಶಾಸಕರಿಗೆ ಸ್ಪಂದಿಸಬೇಕು ಎಂದು ಪ್ರಸ್ತಾಪ ಮಾಡಿದ್ರು, ಪ್ರತಿ ಜಿಲ್ಲೆಯ ಶಾಸಕರು ಮತ್ತು ಉಸ್ತುವಾರಿ ಸಚಿವರ ಸಭೆ ಪ್ರತ್ಯೇಕ ವಾಗಿ ಕರೆಯುವ ಭರವಸೆ ಸಿಎಂ ಕೊಟ್ಟಿದ್ದಾರೆ ಎಂದರು.
ಸಿಎಲ್ ಪಿ ಸಭೆಯಲ್ಲಿ ಬಿ.ಆರ್.ಪಾಟೀಲ್ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರಂತಲ್ಲಾ ಎಂಬ ಪ್ರಶ್ನೆಗೆ ಈ ವಿಚಾರ ಸುಳ್ಳು, ಅವರು ಹಾಗೆ ಹೇಳಿಲ್ಲ ಎಂದರು.

ಅನ್ನಭಾಗ್ಯ ದುಡ್ಡು ಫಲಾನುಭವಿಗಳ ಖಾತೆ ಬಿಟ್ಟು ಬೇರೆ ಖಾತೆಗೆ ಜಮಾ ಆಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಆ ಬಗ್ಗೆ ನಾವು ಪರಿಶೀಲನೆ ಮಾಡುತ್ತೇವೆ. ಆರಂಭದಲ್ಲಿ ಕೆಲವು ಗೊಂದಲ ನಡೆಯುತ್ತವೆ, ಫೇಕ್ ಅಕೌಂಟ್ ಕೊಟ್ಟರೆ ಅದನ್ನು ನಿಲ್ಲಿಸುತ್ತೇವೆ ಎಂದರು.

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯ ವೀಡಿಯೋ ವಿಚಾರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ನನ್ನ ಹೇಳಿಕೆಯನ್ನೇ ಬಿಜೆಪಿಯವರು ಪ್ರಚಾರಕ್ಕೆ ಬಳಸಿದರೆ ಬಳಸಿಕೊಳ್ಳಲಿ. ನಮಗೆ ಜವಾಬ್ದಾರಿ ಇದೆ. ಸರ್ಕಾರ ನಡೆಸುವ ನಾವು ಇಂಥ ಘಟನೆಯನ್ನು ಲಘುವಾಗಿ ಸ್ವೀಕರಿಸೋದಿಲ್ಲ. ಆದರೆ ಇವರು ಬೇರೆ ಬೇರೆ ಅರ್ಥ ಕಲ್ಪಿಸೋದು ಸರಿಯಲ್ಲ, ಅವರು ಹೇಳಿದಕ್ಕೆ, ವ್ಯಾಖ್ಯಾನಕ್ಕೆ ಉತ್ತರ ಕೊಡಲು ಆಗಲ್ಲ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ ವಿದೇಶ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಯಾರು ಹೇಗೆ ಎಲ್ಲಿ ಹೊರ ದೇಶಕ್ಕೆ ಹೊಗ್ತಾರೆ ಅನ್ನೋದು ನಮಗೆ ಗೊತ್ತಿಲ್ಲ. ಸರ್ಕಾರ ಅಸ್ಥಿರ ಮಾಡೋಕೆ ಯಾರಿಂದಲೂ ಆಗಲ್ಲ, ನಾವು ಸುಭ್ರದ್ರವಾಗಿದ್ದೇವೆ ಎಂದು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!