ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ

1,587

Get real time updates directly on you device, subscribe now.


ಮಧುಗಿರಿ: ಬಾವಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ತಾಲೂಕಿನ ಮಿಡಿಗೇಶಿ ಹೋಬಳಿಯ ಹೊಸಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವಾಸಿ ಓಬಳಮ್ಮ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಓಬಳಮ್ಮನ ಸಹೋದರ ಮಗಳನ್ನು ಮದುವೆ ಆಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ಬಾವಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಓಬಳಮ್ಮ ಬಾವಿಗೆ ಬಿದ್ದದ್ದನ್ನು ನೋಡಿ ರಕ್ಷಣೆ ಮಾಡುವಂತೆ ವೃದ್ಧೆಯೊಬ್ಬರು ಕೂಗಿ ಕೊಂಡಿದ್ದಾರೆ.

ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಎನ್ಎಸ್ಎಸ್ ಶಿಬಿರ ಆಯೋಜನೆ ಮಾಡಲಾಗಿದ್ದು, ವೃದ್ಧೆಯ ಕೂಗಿಗೆ ಸಮೀಪದಲ್ಲೇ ಇದ್ದ ಕಾಲೇಜಿನ ವಿದ್ಯಾರ್ಥಿಗಳಾದ ಅನಿಲ್, ಪುನೀತ್, ರೇಖಾ, ಮಂಜುನಾಥ್ ಇವರು ಓಡಿ ಬಂದು ಬಾವಿಗೆ ಇಳಿದು ನೀರಿನಲ್ಲಿ ಮುಳುಗಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ. ವಿದ್ಯಾರ್ಥಿಗಳ ಸಾಹಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Get real time updates directly on you device, subscribe now.

Comments are closed.

error: Content is protected !!