ಭಾರತ ಎಲ್ಲಾ ರಂಗದಲ್ಲಿ ಸದೃಢ

209

Get real time updates directly on you device, subscribe now.

ತುಮಕೂರು: ಸ್ವತಂತ್ರ ಭಾರತ ಎಲ್ಲಾ ರಂಗದಲ್ಲಿಯೂ ಸದೃಢ ಹೆಜ್ಜೆ ಇಡುತ್ತಾ ಸಾಗುತ್ತಿದ್ದು ವೈದ್ಯಕೀಯ, ತಂತ್ರಜ್ಞಾನ, ಆರ್ಥಿಕ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಗಿರುವ ಮೈಲಿಗಲ್ಲುಗಳು ನಮ್ಮ ಆತ್ಮಾಭಿಮಾನ ಹೆಚ್ಚಿಸಿದೆ ಎಂದು ಸಿದ್ಧಗಂಗಾ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ವೈದ್ಯಕೀಯ ಕಾರ್ಯದರ್ಶಿ ಡಾ.ಸಚ್ಚಿದಾನಂದ್ ತಿಳಿಸಿದರು.

ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ನಡೆದ 77 ನೇ ಸ್ವತಂತ್ರ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತವನ್ನು ಮತ್ತಷ್ಟು ವೇಗದಲ್ಲಿ ಸಾಗುವಂತೆ ಮಾಡಲು ನಾವೆಲ್ಲರೂ ನಮ್ಮ ನಮ್ಮ ಕ್ಷೇತ್ರಗಳಲ್ಲಿ ಪರಿಣಿತಿ ಸಾಧಿಸಿ ದೇಶದ ಏಳಿಗೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಮೆಡಿಕಲ್ ಕಾಲೇಜು ಪ್ರಾಚಾರ್ಯರಾದ ಡಾ.ಶಾಲಿನಿ ಮಾತನಾಡಿ ನಾವು ದೇಶಕ್ಕಾಗಿ ಬಲಿದಾನ ಕೊಟ್ಟವರ ಆತ್ಮಚರಿತ್ರೆ ತಿಳಿದುಕೊಳ್ಳಬೇಕು. ಭವ್ಯ ಭಾರತದ ಶ್ರೇಷ್ಠತೆಯನ್ನು ಆಚರಿಸುವುದರ ಜೊತೆಗೆ ದೇಶವನ್ನು ಏಕತೆಯಿಂದ ಕಟ್ಟುವ ಪ್ರತಿಜ್ಞೆ ಮಾಡಬೇಕು ಎಂದರು.

ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ನಿರಂಜನಮೂರ್ತಿ ಮಾತನಾಡಿ ಶಿವಕುಮಾರ ಶ್ರೀಗಳು ತ್ರಿವಿಧ ದಾಸೋಹದ ಮೂಲಕ ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಮೇಲ್ಪಂಕ್ತಿ ಹಾಕಿಕೊಟ್ಟವರು, ಅವರ ದೇಶ ಪ್ರೇಮದ ದಾರಿಯಲ್ಲಿ ನಾವೂ ನಡೆಯಬೇಕು ಎಂದು ಕರೆ ನೀಡಿದರು.

ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ವಿದ್ಯಾರ್ಥಿಗಳು ದೇಶಪ್ರೇಮ ಸಾರುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಆಸ್ಪತ್ರೆ ಸ್ಪೆಷಾಲಿಟಿ ಹಾಗೂ ಸೂಪರ್ ಸ್ಪೆಷಾಲಿಟಿ ವೈದ್ಯರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!