ಅಕ್ರಮ ಸಂಬಂಧ ಶಂಕೆ- ಮಹಿಳೆಯ ಕೊಲೆ

311

Get real time updates directly on you device, subscribe now.


ವೈ.ಎನ್.ಹೊಸಕೋಟೆ: ಹೋಬಳಿಯ ಬೂದಿಬೆಟ್ಟ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಕ್ರಮ ಸಂಬಂಧ ಶಂಕೆಯಿಂದ ಪತಿ ಪತ್ನಿಯನ್ನು ಕೊಂದ ಘಟನೆ ನಡೆದಿದೆ.

ಮಂಗಳವಾರ ಬೆಳಗ್ಗೆ ಲಕ್ಷ್ಮಿ (32) ಎಂಬ ಮಹಿಳೆ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಪತಿ ರಾಮಾಂಜಿ (42) ಅಕ್ರಮ ಸಂಬಂಧ ಶಂಕೆ ವ್ಯಕ್ತಪಡಿಸಿದ್ದಾನೆ. ಈ ವೇಳೆ ಗಂಡ ಹೆಂಡತಿಯ ನಡುವೆ ಗಲಾಟೆ ನಡೆದಿದೆ. ಈ ಬಗ್ಗೆ ಗ್ರಾಮದಲ್ಲಿ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆದಿದೆ, ರಾತ್ರಿ 10.30 ಸಮಯದಲ್ಲಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಿಯ ತಲೆಯ ಮೇಲೆ ಪತಿ ರಾಮಾಂಜಿ ಒಣಕೆಯಿಂದ ಹೊಡೆದು ಮನೆಯ ಹೊರಗೆ ಎಳೆತಂದು ಕಲ್ಲಿನಿಂದ ತಲೆಯನ್ನು ಜಜ್ಜಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಮೃತಳ ಸಂಬಂಧಿ ದೂರು ಸಲ್ಲಿಸಿದ್ದಾರೆ. ಈ ದೂರಿನನ್ವಯ ವೈ.ಎನ್.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಲಕ್ಷ್ಮಿ ಇಬ್ಬರ ಮಕ್ಕಳನ್ನು ಹೊಂದಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್, ಡಿವೈಎಸ್ ಪಿ ವೆಂಕಟೇಶ್ ನಾಯ್ಡು, ಸಿಪಿಐ ಬಿ.ಸಿ.ಗಿರೀಶ್, ಎಸ್ ಐ ಮಾಳಪ್ಪ ನಾಯ್ಕೋಡಿ, ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!