ಎನ್ಇಪಿ ವಿರುದ್ಧ ಹೋರಾಟ ಮುಂದುವರೆಯಲಿ

115

Get real time updates directly on you device, subscribe now.


ತುಮಕೂರು: ಪ್ರಜಾಪ್ರಭುತ್ವದ ಆಶಯಗಳಿಗೆ ವಿರೋಧವಾಗಿರುವ, ಅವಕಾಶ ವಂಚಿತರ ಸಮುದಾಯಗಳನ್ನು, ಬಡ ಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಯುವಂತೆ ಮಾಡುತ್ತಿರುವ ಎನ್ಇಪಿ ವಿರುದ್ಧ ವಿದ್ಯಾರ್ಥಿಗಳ ಹೋರಾಟ ಮುಂದುವರೆಯಲಿ ಎಂದು ಪ್ರಗತಿಪರ ಚಿಂತಕ ದೊರೈರಾಜು ತಿಳಿಸಿದರು.

ನಗರದ ಗಾಜಿನಮನೆಯಲ್ಲಿ ಹಮ್ಮಿಕೊಂಡಿದ್ದ ಎಐಡಿಎಸ್ಒನ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನದ ಬಹಿರಂಗ ಅಧಿವೇಶನ ಉದ್ಘಾಟಿಸಿ ಮಾತನಾಡಿ, ಇಂದು ಸರ್ಕಾರಗಳು ಕಾರ್ಪೊರೇಟ್, ಬಂಡವಾಳ ಶಾಹಿಗಳ ಕೈಗೊಂಬೆಗಳಂತೆ ನೀತಿಗಳನ್ನು ಜಾರಿಗೆ ತರುತ್ತಿವೆ, ಹೋರಾಟಗಳಿಲ್ಲದೆ ಇದನ್ನು ಸರಿದಾರಿಗೆ ತರಲು ಸಾಧ್ಯವಿಲ್ಲ, ವಿದ್ಯಾರ್ಥಿ ಯುವಜನರೇ ಈ ಹೋರಾಟಗಳ ಜೀವಾಳ ಎಂಬುದನ್ನು ಇತಿಹಾಸವೇ ಸಾಬೀತು ಮಾಡಿದೆ ಎಂದರು.

ಎಐಡಿಎಸ್ಒನ ಅಖಿಲ ಭಾರತ ಅಧ್ಯಕ್ಷ ವಿ.ಎನ್.ರಾಜಶೇಖರ್ ಮಾತನಾಡಿ, ಸಾರ್ವಜನಿಕ ಶಿಕ್ಷಣ ಉಳಿಸಿ ಎಂಬ ಘೋಷಣೆಯೊಂದಿಗೆ ಇಡೀ ರಾಜ್ಯಾದ್ಯಂತ ನಡೆದ ಬೃಹತ್ ಚಳವಳಿಯ ಪ್ರತಿ ಫಲವಾಗಿ ಪ್ರಸ್ತುತ ರಾಜ್ಯ ಸರ್ಕಾರ ಎನ್ಇಪಿಯನ್ನುರದ್ದುಗೊಳಿಸಿದೆ, ಆದರೆ ಇದೇ ಸರ್ಕಾರ ಎನ್ಇಪಿಯ ಭಾಗವಾಗಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಮೂಲಕ ಖಾಸಗಿಯವರಿಗೆ ದತ್ತು ನೀಡಬೇಕೆಂದು ಪ್ರಸ್ತಾಪಿಸಿರುವುದು ಆತಂಕಕಾರಿಯಾಗಿದೆ, ಇದರ ವಿರುದ್ಧ ಮತ್ತೆ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಬೃಹತ್ ಚಳವಳಿ ಕಟ್ಟುವ ತುರ್ತು ಅವಶ್ಯಕತೆ ಎದುರಾಗುತ್ತಿದೆ, ವಿದ್ಯಾರ್ಥಿಗಳು ಇದಕ್ಕೆ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು.

ಎಐಡಿಎಸ್ಓನ ರಾಜ್ಯ ಕಾರ್ಯದರ್ಶಿ ಅಜಯ್ಕಾಮತ್ ಮಾತನಾಡಿ ಈ ದೇಶದ ಮಹಾನ್ ಕ್ರಾಂತಿಕಾರಿಗಳಾದ ಭಗತ್ಸಿಂಗ್, ನೇತಾಜಿಯವರು ದೇಶದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಿಷ್ಠವಾಗಿರಬೇಕು ಎಂದು ಆಶಿಸಿದ್ದರು, ಅವರ ಈ ಕನಸನ್ನುನನಸಾಗಿಸುವ ಸಂಕಲ್ಪ ತೆಗೆದುಕೊಳ್ಳುವುದೇ 75ನೇ ಸ್ವಾತಂತ್ರ್ಯ ವರ್ಷಾಚರಣೆಯ ಸಮಾರೋಪದ ನೈಜ ಆಶಯವಾಗಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಡಿಎಸ್ಓನ ರಾಜ್ಯಅಧ್ಯಕ್ಷೆ ಅಶ್ವಿನಿ.ಕೆ.ಎಸ್ ವಹಿಸಿದ್ದರು, ಎಐಡಿಎಸ್ ಓನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಸೌರವ್ ಘೋಷ್, ರಾಜ್ಯ ಸಮಿತಿಯ ಉಪಾಧ್ಯಕ್ಷ ಹಣಮಂತು ಖಜಾಂಚಿ ಅಭಯಾ ದಿವಾಕರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು,

Get real time updates directly on you device, subscribe now.

Comments are closed.

error: Content is protected !!