ತುಮಕೂರು ಎಸ್ಪಿಯಾಗಿ ಅಶೋಕ್ ಅಧಿಕಾರ ಸ್ವೀಕಾರ

748

Get real time updates directly on you device, subscribe now.


ತುಮಕೂರು: ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಅಶೋಕ್.ಕೆ.ವಿ. ಅವರು ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ವರ್ಗಾವಣೆಯಾಗಿರುವ ರಾಹುಲ್ ಕುಮಾರ್ ಶಹಪೂರ ವಾಡ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಲೋಕಾಯುಕ್ತದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಶೋಕ್.ಕೆ.ವಿ. ಅವರು ತುಮಕೂರು ಎಸ್ಪಿಯಾಗಿ ವರ್ಗಾವಣೆಗೊಂಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ, ನೂತನ ಎಸ್ಪಿ ಅಶೋಕ್ ರವರ ಪತ್ನಿ ಅಶ್ವಿಜ.ಬಿ.ವಿ. ಅವರು ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದಾರೆ.

ತುಮಕೂರು ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರರಾಗಿ ಅಶೋಕ್.ಕೆ.ವಿ ಅವರು ಅಧಿಕಾರ ಸ್ವೀಕರಿಸಿ ಹಿಂದಿನ ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಅವರಿಂದ ಹೂ ಗುಚ್ಛ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರ ಮರಿಯಪ್ಪ, ಡಿವೈಎಸ್ಪಿ, ಸಿಪಿಐ, ಇನ್ಸ್ಪೆಕ್ಟರ್ಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!