ಸಾಲಬಾಧೆಗೆ ಮೂವರು ಆತ್ಮಹತ್ಯೆ

242

Get real time updates directly on you device, subscribe now.


ತುಮಕೂರು: ಸಾಲಬಾಧೆಯಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತುಮಕೂರು ಸಮೀಪದ ಪಂಡಿತನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ, ಆತ್ಮಹತ್ಯೆಗೆ ಶರಣಾದವರನ್ನು ಸಿದ್ದಗಂಗಯ್ಯ(62), ಸುನಂದಮ್ಮ(50) ಮತ್ತು ಗೀತಾ(30) ಎಂದು ಗುರುತಿಸಲಾಗಿದೆ.

ಬೆಸ್ಕಾಂನಲ್ಲಿ ಕಾರ್ಯ ನಿರ್ವಹಿಸಿದ್ದ ಸಿದ್ದಗಂಗಯ್ಯ 2 ವರ್ಷದ ಹಿಂದೆ ನಿವೃತ್ತರಾಗಿದ್ದರು, ನಿವೃತ್ತಿ ನಂತರ ಬೆಂಗಳೂರಿನ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ನಡೆಸುತ್ತಿದ್ದರು ಎನ್ನಲಾಗಿದೆ.
ಸೋಮವಾರ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರೈಲು ಗುದ್ದಿದ ರಭಸಕ್ಕೆ ಮೃತ ದೇಹಗಳು ಛಿದ್ರವಾಗಿವೆ, ಮೃತ ದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!